ADVERTISEMENT

ಮುದಗಲ್: ಕೊಲೆ ಯತ್ನ: ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2021, 14:20 IST
Last Updated 4 ಡಿಸೆಂಬರ್ 2021, 14:20 IST

ಮುದಗಲ್: ಸಮೀಪದ ತೊಡಕಿ ಗ್ರಾಮದಲ್ಲಿ ಹಳೆ ವೈಷಮ್ಯದ ಕಾರಣಕ್ಕೆ ಚಾಕುವಿನಿಂದ ಇರಿದು ಇಬ್ಬರ ಕೊಲೆಗೆ ಯತ್ನಿಸಲಾಗಿದೆ.

ಶುಕ್ರವಾರ ನಡೆದ ಘಟನೆಯಲ್ಲಿ ಬಸವರಾಜ ಮತ್ತು ವೀರೇಶ ಎಂಬುವರು ಗಾಯಗೊಂಡಿದ್ದಾರೆ. ಅವರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೀರೇಶ ಸ್ಥಿತಿ ಗಂಭೀರವಾದ ಕಾರಣ ಗಂಗಾವತಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಮುದಗಲ್‌ ಪೊಲೀಸ್‌ ಠಾಣೆಯಲ್ಲಿ ನಿರುಪಾದಿ ಗವಿಸಿದ್ದಪ್ಪ, ಹನುಮಂತ ಹುಲಿಗೆಪ್ಪ ಹಾಗೂ ಮೌನೇಶ ಹುಲಿಗೆಪ್ಪ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.