ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ತವಗ ಗ್ರಾಮದಿಂದ ಬೆಂಗಳೂರಿಗೆ ಗುಳೆ ಹೋಗಿದ್ದ ಮಲ್ಲಪ್ಪ ತಳವಾರ (56) ಮಂಗಳವಾರ ಬೆಳಿಗ್ಗೆ ಹಿಂತಿರುಗಿದ ಕೆಲವೇ ಗಂಟೆಗಳಲ್ಲೇ ಮೃತಪಟ್ಟಿದ್ದರಿಂದ ಗ್ರಾಮದಲ್ಲಿ ಕೊರೊನಾದಿಂದ ಮೃತಪಟ್ಟಿರಬಹುದು ಎನ್ನುವ ಆತಂಕ ಆವರಿಸಿಕೊಂಡಿದೆ.
ದೇವದುರ್ಗ ತಾಲ್ಲೂಕಿನ ಸೋಮನಮರಡಿ ಗ್ರಾಮಕ್ಕೆ ಕ್ರೂಸರ್ನಲ್ಲಿ ತಲುಪಿ, ಅಲ್ಲಿಂದ ಗ್ರಾಮಕ್ಕೆ ಬಂದಿದ್ದರು. ಶವದ ಹತ್ತಿರ ಜನರು ಹೋಗುವುದಕ್ಕೆ ಹಿಂಜರಿಯುತ್ತಿದ್ದು, ದೂರದಿಂದಲೇ ಗಮನಿಸುತ್ತಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರುದ್ರಗೌಡ ಅವರು ಗ್ರಾಮಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.
‘ಮೃತ ವ್ಯಕ್ತಿ ಮದ್ಯವ್ಯಸನಿಯಾಗಿದ್ದರು ಎನ್ನುವ ಪ್ರಾಥಮಿಕ ಮಾಹಿತಿ ಬಂದಿದೆ. ಸಾವಿಗೆ ಏನು ಕಾರಣ ಎಂಬುದು ಮರಣೋತ್ತರ ಪರೀಕ್ಷೆ ನಂತರ ಗೊತ್ತಾಗಲಿದೆ. ಸ್ಥಳಕ್ಕೆ ಆರೋಗ್ಯಾಧಿಕಾರಿಗಳೆಲ್ಲ ಹೋಗಿದ್ದಾರೆ. ಆನಂತರ ವರದಿ ಗೊತ್ತಾಗುತ್ತದೆ’ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.