ADVERTISEMENT

ಭತ್ತದ ಗದ್ದೆಯಲ್ಲಿ ಕರಡಿ ಪ್ರತ್ಯೇಕ್ಷವಾದ ವಿಡಿಯೋ ಸೆರೆ: ಜನರಲ್ಲಿ ಆತಂಕ

​ಪ್ರಜಾವಾಣಿ ವಾರ್ತೆ
Published 8 ಮೇ 2021, 12:13 IST
Last Updated 8 ಮೇ 2021, 12:13 IST

ಸಿರವಾರ (ರಾಯಚೂರು ಜಿಲ್ಲೆ): ತಾಲ್ಲೂಕಿನ ನವಲಕಲ್ಲು ಹೊರವಲಯದ ಜಮೀನೊಂದರಲ್ಲಿ ಶನಿವಾರ ಕರಡಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ.

ಗ್ರಾಮದ ರೈತರು ಭತ್ತದ ಮೇವು ತೆಗೆದುಕೊಳ್ಳಲು ಜಮೀನಿಗೆ ತೆರಳುವಾಗ ಟ್ರ್ಯಾಕ್ಟರ್ ಶಬ್ದಕ್ಕೆ ಕರಡಿ ಓಡಿ ಹೋಗುತ್ತಿರುವುದನ್ನು ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ. ಇದೇ ಮೊದಲ ಸಲ ಕರಡಿ ಕಾಣಿಸಿಕೊಂಡಿದ್ದು, ಅಚ್ಚರಿಯಿಂದ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೀಕ್ಷಿಸುತ್ತಿದ್ದಾರೆ.

ಗ್ರಾಮಕ್ಕೆ ಹೊಂದಿಕೊಂಡು ಕಲ್ಲಿನ ಗುಡ್ಡಗಳಿದ್ದು, ಅದರಲ್ಲಿಯೇ ಕರಡಿ ವಾಸ ಮಾಡಿಕೊಂಡಿರಬಹುದು ಎಂದು ಜನರು ಚರ್ಚಿಸುತ್ತಿದ್ದಾರೆ. ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ರಾಜೇಶ ನಾಯಕ ಭೇಟಿ‌ ನೀಡಿ ಪರಿಶೀಲಿಸಿದ್ದು, ಯಾವುದೇ ಆತಂಕ ಅವಶ್ಯಕತೆ ಇಲ್ಲ ಎಂದು ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.