ಸಿಂಧನೂರು: ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆನಗರದ ಪಿಡಬ್ಲ್ಯೂಡಿ ಕ್ಯಾಂಪ್ ಸಮೀಪ ನಡೆದಿದೆ.
ಗೋಪಿ ಹೋಗಿಬಂಡಿ (28) ಮೃತ ಯುವಕ. ಮೊಹರಂ ಹಬ್ಬದ ಅಂಗವಾಗಿ ಮುಳ್ಳೂರು ಗ್ರಾಮಕ್ಕೆ ತೆರಳಿದ್ದ. ಹಬ್ಬ ಮುಗಿಸಿಕೊಂಡು ಸೋಮವಾರ ರಾತ್ರಿ 2ರ ಸುಮಾರಿಗೆ ಬೈಕ್ ಮೇಲೆ ಸಿಂಧನೂರಿಗೆ ಬರುವಾಗ ವಾಹನವೊಂದಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯೊಂಡು ಸ್ಥಳದಲ್ಲಿ ಮೃತಪಟ್ಟ ಎಂದು ಪೊಲೀಸರು ತಿಳಿಸಿದ್ದಾರೆ. ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.