ಸಿಂಧನೂರು: ನಗರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನ ಅಂಗವಾಗಿ ಮಂಗಳವಾರ ಪಕ್ಷದ ಧ್ವಜಾರೋಹಣ ನೆರವೇರಿಸಲಾಯಿತು.
ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಟಿ.ಹನುಮೇಶ ಸಾಲಗುಂದಾ ಮಾತನಾಡಿ, ‘ಜನಸಂಘದಿಂದ ಬಿಜೆಪಿ ಸ್ಥಾಪನೆವರೆಗೆ ರಾಷ್ಟ್ರಸೇವೆಯ ಯಜ್ಞದಲ್ಲಿ ಸಹಸ್ರಾರು ನಾಯಕರು, ಕಾರ್ಯಕರ್ತರು ಶ್ರಮ ವಹಿಸಿದ್ದಾರೆ. ಅವರಲ್ಲಿ ಮುಖ್ಯವಾಗಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮತ್ತು ಶಾಮ್ ಪ್ರಸಾದ್ ಮುಖರ್ಜಿ ಅವರ ಕೊಡುಗೆ ಅನನ್ಯವಾಗಿದೆ’ ಎಂದು ಹೇಳಿದರು.
ನಗರ ಮಂಡಲ ಅಧ್ಯಕ್ಷೆ ಪ್ರೇಮಾ ಸಿದ್ದಾಂತಿಮಠ, ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಮಮತಾ ಹಿರೇಮಠ, ಶಿವಬಸನಗೌಡ ಗೊರೇಬಾಳ, ಟಿ.ಸುಬ್ಬಾರಾವ್, ಲಿಂಗರಾಜ್ ಹಲಗಿ, ರಾಮನಗೌಡ ವಕೀಲ, ಮಂಜುನಾಥ ಹರಸೂರು, ರವಿ ರಾಠೋಡ್, ಮಲ್ಲಿಕಾರ್ಜುನ ಕಾಟಗಲ್, ರವಿಕುಮಾರ ಉಪ್ಪಾರ, ಸಿದ್ದು ಹೂಗಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.