ADVERTISEMENT

ಮಸ್ಕಿ ಕ್ಷೇತ್ರದ ಬಿಜೆಪಿ ಟಿಕೆಟ್‌ ಖಚಿತ: ಅನರ್ಹ ಶಾಸಕ ಪ್ರತಾಪಗೌಡ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 10:36 IST
Last Updated 1 ನವೆಂಬರ್ 2019, 10:36 IST
   

ಕವಿತಾಳ (ರಾಯಚೂರು ಜಿಲ್ಲೆ): ‘ಸುಪ್ರೀಂ ಕೋರ್ಟ್‌ನ ತೀರ್ಪು ನಮ್ಮ ಪರವಾಗಿ ಬರುವ ವಿಶ್ವಾಸವಿದ್ದು, ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತ’ ಎಂದು ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

‘ಬಿಜೆಪಿ ಟಿಕೆಟ್‍ ಆಕಾಂಕ್ಷಿ ಆರ್‌.ಬಸನಗೌಡ ತುರ್ವಿಹಾಳ ಅವರನ್ನು ಕಾಡಾ ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ. ಹೀಗಾಗಿ ನನಗೆ ಟಿಕೆಟ್‍ ಸಿಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT