ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಪದವಿ ಪೂರ್ವ ಕಾಲೇಜು ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದ ಬಾಲಕನೊಬ್ಬ ಹೊಟ್ಟೆನೋವಿನಿಂದ ರಾಯಚೂರಿನ ಓಪೆಕ್ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾನೆ.
ದೇವದುರ್ಗ ತಾಲ್ಲೂಕು ಮದರಕಲ್ ಗ್ರಾಮದ ಮಲ್ಲೇಶ (14) ಮೃತ ಬಾಲಕ. ಪಾಲಕರೊಂದಿಗೆ ಮುಂಬೈನಿಂದ ಮೇ 16 ರಂದು ಬಂದಿದ್ದ ಬಾಲಕನಿಗೆ ಹೊಟ್ಟೆನೋವು ಶುರುವಾಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಾಲಕನ ಗಂಟಲು ದ್ರುವ ಮಾದರಿಯನ್ನು ಸಂಗ್ರಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.