ರಾಯಚೂರು: ಜಿಲ್ಲೆಯ ದೇವದುರ್ಗ ಪಟ್ಟಣದ ಪದವಿ ಪೂರ್ವ ಕಾಲೇಜು ಸಾಂಸ್ಥಿಕ ಕ್ವಾರಂಟೈನ್ನಲ್ಲಿದ್ದ ಬಾಲಕನೊಬ್ಬ ಹೊಟ್ಟೆನೋವಿನಿಂದ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾನೆ.
ದೇವದುರ್ಗ ತಾಲ್ಲೂಕು ಮದರಕಲ್ ಗ್ರಾಮದ ಮಲ್ಲೇಶ (14) ಮೃತ ಬಾಲಕ. ಪಾಲಕರೊಂದಿಗೆ ಮುಂಬೈನಿಂದ ಮೇ 16 ರಂದು ಬಂದಿದ್ದ ಬಾಲಕನಿಗೆ ಹೊಟ್ಟೆನೋವು ಶುರುವಾಗಿದ್ದರಿಂದ ಗುರುವಾರ ಬೆಳಗಿನ ಜಾವ ಆ್ಯಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ತರಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಬಾಲಕನ ಗಂಟಲು ದ್ರುವ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.