ರಾಯಚೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಕರೆತರುವ ಹೆಲಿಕಾಪ್ಟರ್ ಭೂಸ್ಪರ್ಶ ಮಾಡಲು ನಿರ್ಮಾಣ ಮಾಡಿರುವ ಹೆಲಿಪ್ಯಾಡ್ ಪಕ್ಕದ ನೆಲವನ್ನು ಸಮತಟ್ಟು ಮಾಡುತ್ತಿದ್ದ ರೂಲರ್ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿದ್ದರಿಂದ ಸುಮಾರು 20 ನಿಮಿಷ ಪೊಲೀಸರು ಮತ್ತು ಅಧಿಕಾರಿಗಳು ಆತಂಕ ಅನುಭವಿಸಿದ ಪ್ರಸಂಗ ಜಿಲ್ಲೆಯ ದೇವದುರ್ಗ ತಾಲ್ಲೂಕು ತಿಂಥಣಿ ಸೇತುವೆ ಬಳಿ ಸೋಮವಾರ ಬೆಳಿಗ್ಗೆ ನಡೆಯಿತು.
ಬಳ್ಳಾರಿಯಿಂದ ಬೆಳಿಗ್ಗೆ 11.30ಕ್ಕೆ ಹೆಲಿಕಾಪ್ಟರ್ ಮೂಲಕ ಹೊರಟಿದ್ದು, ಮಧ್ಯಾಹ್ನ 12.15 ಕ್ಕೆ ತಿಂಥಣಿ ತಲುಪಲಿದೆ. ಈ ಮಧ್ಯೆ 11.30ಕ್ಕೆ ರೂಲರ್ ಕೆಟ್ಟು ನಿಂತುಕೊಂಡಿತ್ತು. ಕೊನೆಗೂ ಹರಸಾಹಸ ಮಾಡಿ, ಹೆಲಿಪ್ಯಾಡ್ ಜಾಗದಿಂದ ರೂಲರ್ ತೆರವು ಮಾಡಿಸಲಾಗಿದ್ದು, ಆನಂತರ ಅಧಿಕಾರಿಗಳು ನೆಮ್ಮದಿ ನಿಟ್ಟಿಸಿರು ಬಿಡುವಂತಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.