ರಾಯಚೂರು: ಸಾರಿಗೆ ನೌಕರರ ಮುಷ್ಕರವು ಮುಂದುವರಿದಿದ್ದು, ಶಿಸ್ತು ಉಲ್ಲಂಘನೆ ಆಧರಿಸಿ ಮೂವರು ನೌಕರರನ್ನು ವಜಾಗೊಳಿಸಲಾಗಿದೆ.
‘ನೌಕರರ ವಿವರ ಹಾಗೂ ಅವರ ಡಿಪೋ ಕೂಡಾ ಹೇಳುವುದಕ್ಕೆ ಆಗುವುದಿಲ್ಲ’ ಎಂದು ಎನ್ಇಕೆಆರ್ಟಿಸಿ ರಾಯಚೂರು ವಿಭಾಗದ ನಿಯಂತ್ರಕ ಎಂ.ವೆಂಕಟೇಶ ತಿಳಿಸಿದರು.
‘ಜಿಲ್ಲೆಯ ವ್ಯಾಪ್ತಿಯಲ್ಲಿ 35 ಸಾರಿಗೆ ಬಸ್ಗಳು ಸಂಚಾರ ಆರಂಭಿಸಲಾಗಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶ ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಮಾತನಾಡಿ, ಅಲ್ಲಿಂದ ರಾಯಚೂರಿಗೆ ಹೆಚ್ಚುವರಿ ಬಸ್ಗಳನ್ನು ಬಿಡಿಸಲಾಗಿದೆ. 50ಕ್ಕೂ ಹೆಚ್ಚಿನ ಬಸ್ಗಳು ಸಂಚಾರ ಆರಂಭಿಸಿವೆ. ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲಕ್ಕೆ ಹೋಗುವ ಭಕ್ತರಿಗೆ ಅನುಕೂಲವಾಗುವಂತೆ ಸಂಸ್ಥೆಯಿಂದ 20 ಹೆಚ್ಚುವರಿ ಬಸ್ಗಳನ್ನು ಬಿಡಲಾಗಿದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.