ADVERTISEMENT

ರಾಯಚೂರು: ಅಗ್ನಿ ಅವಘಡ– ಹೊತ್ತಿ ಉರಿದ ಕಾರು

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2022, 13:57 IST
Last Updated 22 ನವೆಂಬರ್ 2022, 13:57 IST
   

ರಾಯಚೂರು: ನಗರದ ಚಂದ್ರಬಂಡಾ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಮಂಗಳವಾರ ಸಂಜೆ ನಡೆದಿದೆ.

ಅದರಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಹಾಗೂ ಪಾಲಕರು ಅಪಾಯದಿಂದ ಪಾರಾಗಿದ್ದಾರೆ. ಬೆಂಕಿ ಅನಾಹುತಕ್ಕೆ ಕಾರಣ ಗೊತ್ತಾಗಿಲ್ಲ.

‘ಪಕ್ಕದಲ್ಲೇ ಜನವಸತಿಗಳಿದ್ದು, ಜನರು ಕೂಡಲೇ ನೆರವಿಗೆ ಧಾವಿಸಿ ಕಾರಿನಲ್ಲಿದ್ದ ಮಕ್ಕಳನ್ನು ಹೊರಗೆಳೆದುಕೊಂಡಿದ್ದಾರೆ’ ಎಂದು ಇದೇ ಮಾರ್ಗದಿಂದ ಗ್ರಾಮಕ್ಕೆ ತೆರಳುತ್ತಿದ್ದ ಪ್ರತ್ಯೇಕ್ಷದರ್ಶಿ ಲಕ್ಷ್ಮಣಗೌಡ ಕಡಗಂದೊಡ್ಡಿ ’ಪ್ರಜಾವಾಣಿ‘ಗೆ ತಿಳಿಸಿದರು.

ADVERTISEMENT

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.