ADVERTISEMENT

ಭುವನೇಶ್ವರಿಗೆ 3ನೇ ರ್‍ಯಾಂಕ್‌

​ಪ್ರಜಾವಾಣಿ ವಾರ್ತೆ
Published 24 ಮೇ 2025, 14:54 IST
Last Updated 24 ಮೇ 2025, 14:54 IST
   

ಲಿಂಗಸುಗೂರು (ರಾಯಚೂರು ಜಿಲ್ಲೆ): ಇಲ್ಲಿಯ ಉಮಾಮಹೇಶ್ವರಿ ಪಿಯು ಕಾಲೇಜು ವಿದ್ಯಾರ್ಥಿನಿ ಭುವನೇಶ್ವರಿ ಮಲ್ಲಿಕಾರ್ಜುನ ಅವರು ಸಿಇಟಿ ಪಶು ವೈದ್ಯಕೀಯ ವಿಭಾಗದಲ್ಲಿ ರಾಜ್ಯಕ್ಕೆ ಮೂರನೇ ರ್‍ಯಾಂಕ್‌ ಪಡೆದಿದ್ದಾರೆ.

ರಾಯಚೂರು ತಾಲ್ಲೂಕಿನ ಮಮದಾಪೂರ ಗ್ರಾಮದ ಭುವನೇಶ್ವರಿ ಮಲ್ಲಿಕಾರ್ಜುನ ಅವರು

ಪಶು ವೈದ್ಯಕೀಯ ವಿಭಾಗದಲ್ಲಿ ರಾಜ್ಯಕ್ಕೆ 3 ನೇ ಹಾಗೂ ಕೃಷಿ ವಿಜ್ಞಾನ ವಿಭಾಗದಲ್ಲಿ 7 ನೇ ರ್‍ಯಾಂಕ್‌ ಪಡೆದಿದ್ದಾರೆ.

ADVERTISEMENT

‘ಕಾಲೇಜಿನ ಪ್ರಾಚಾರ್ಯ, ಉಪನ್ಯಾಸಕರ ಪ್ರೋತ್ಸಾಹ ಹಾಗೂ ತಂದೆ ತಾಯಿಗಳ ಪ್ರೇರಣೆಯಿಂದ ಸಿಇಟಿಯಲ್ಲಿ ಉತ್ತಮ ರ್‍ಯಾಂಕ್‌ ಪಡೆಯಲು ಸಾಧ್ಯವಾಗಿದೆ‘ ಎಂದು ಭುವನೇಶ್ವರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.