ADVERTISEMENT

‘ಸಿಎಂ ಶಾಸಕರ ಮನವೊಲಿಸುವರು’

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 16:33 IST
Last Updated 8 ಆಗಸ್ಟ್ 2021, 16:33 IST

ರಾಯಚೂರು: ‘ಖಾತೆಗಳ ಹಂಚಿಕೆಯಿಂದ ಅತೃಪ್ತಗೊಂಡ ಶಾಸಕರನ್ನು ಸಮಾಧಾನಪಡಿಸುವ ಶಕ್ತಿ ಮುಖ್ಯಮಂತ್ರಿ ಅವರಿಗಿದೆ’ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ಎಲ್ಲವೂ ಅವರಿಗೆ ಗೊತ್ತಿದೆ. ಮುಖ್ಯಮಂತ್ರಿಗಳಿಗೆ ನಮ್ಮ ಅವಶ್ಯಕತೆ ಇದ್ದರೆ ಅವರೊಂದಿಗೆ ಕೈ ಜೋಡಿಸುತ್ತೇವೆ. ನನಗೆ ನೀಡಿರುವ ಖಾತೆ ಬಗ್ಗೆ ತೃಪ್ತಿ ಇದೆ. ಯಾವ ಖಾತೆ ಕೊಟ್ಟರೂ ನಿಭಾಯಿಸುವಷ್ಟು ಶಕ್ತಿ ಇದೆ ಎಂದು ಸುದ್ದಿಗಾರರಿಗೆ ತಿಳಿಸಿದರು. ‘ಜಿಲ್ಲೆಯನೆರೆ ಪೀಡಿತ ಪ್ರದೇಶಗಳ ಭೇಟಿಗಾಗಿ ಬಂದಿದ್ದೇನೆ. ಆದರೆ, ತುರ್ತು ಕೆಲಸ ಇರುವುದರಿಂದ ಬೆಂಗಳೂರಿಗೆ ಹೋಗಬೇಕಾಗಿದೆ. ಭಾನುವಾರದ ಭೇಟಿ ಮೊಟಕುಗೊಳಿಸಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT