ADVERTISEMENT

ರಾಯಚೂರು: ಕಾಲೇಜಿನತ್ತ ಬಾರದ ವಿದ್ಯಾರ್ಥಿಗಳು

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 8:24 IST
Last Updated 17 ನವೆಂಬರ್ 2020, 8:24 IST
ಕೋವಿಡ್‌ ಸುರಕ್ಷಾ ಕ್ರಮಗಳ ಬಗ್ಗೆ ಕಾಲೇಜು ಸಿಬ್ಬಂದಿ ಸಮಾಲೋಚನೆ ನಡೆಸಿದರು.
ಕೋವಿಡ್‌ ಸುರಕ್ಷಾ ಕ್ರಮಗಳ ಬಗ್ಗೆ ಕಾಲೇಜು ಸಿಬ್ಬಂದಿ ಸಮಾಲೋಚನೆ ನಡೆಸಿದರು.   

ರಾಯಚೂರು: ರಾಜ್ಯ ಸರ್ಕಾರದ ಆದೇಶದಂತೆ ಕಾಲೇಜುಗಳು ಮಂಗಳವಾರದಿಂದ ಆರಂಭವಾಗಿದ್ದರೂ ವಿದ್ಯಾರ್ಥಿಗಳು ಹಾಜರಾಗಿಲ್ಲ.
ಕೋವಿಡ್ ತಪಾಸಣೆ ವರದಿಯನ್ನು ಜೊತೆಯಲ್ಲಿ ತರುವಂತೆ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ.

ಕೆಲವು ವಿದ್ಯಾರ್ಥಿಗಳು ಗಂಟಲು ದ್ರವ ಮಾದರಿ ನೀಡಿದ್ದು, ಇನ್ನೂ ವರದಿ ಬಂದಿಲ್ಲ ಎನ್ನುವ ಕಾರಣದಿಂದ ಕಾಲೇಜಿಗೆ ಹಾಜರಾಗಿಲ್ಲ ಎಂದು ಪ್ರಾಂಶುಪಾಲರು ತಿಳಿಸಿದರು.

ರಾಯಚೂರಿನ ಎಲ್ ವಿಡಿ ಕಾಲೇಜಿನಲ್ಲಿ ಮೊದಲ ಹಂತವಾಗಿ ಪ್ರಾಧ್ಯಾಪಕರು ಮತ್ತು ಸಿಬ್ಬಂದಿಯ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸುತ್ತಿರುವುದು ಕಂಡುಬಂತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.