ಅರಕೇರಾ (ದೇವದುರ್ಗ): ‘ದೇಶಕ್ಕೆ ಕಾಂಗ್ರೆಸ್ ಕೊಡುಗೆ ಅಪಾರ. ಸಂಘಟನೆ ಬಲಪಡಿಸುವ ಮೂಲಕ ಪಕ್ಷ ಬಲವರ್ಧನೆ ಮಾಡಬೇಕು’ ಎಂದು ಮುಖಂಡ ರಾಜಶೇಖರ ನಾಯಕ ಹೇಳಿದರು.
ಗ್ರಾಮದಲ್ಲಿ ಭಾನುವಾರ ಕಾಂಗ್ರೆಸ್ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೋಮುವಾದಿ ಬಿಜೆಪಿಯಿಂದ ದೇಶದ ಐಕ್ಯತೆ ಉಳಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಸಂಘಟನೆಯಿಂದ ದೇಶದ ಪ್ರಗತಿ ಸಾಧ್ಯ ಎಂದು ಹೇಳಿದರು.
ಅರವತ್ತು ವರ್ಷಕ್ಕೂ ಹೆಚ್ಚು ಕಾಲ ಅಧಿಕಾರ ನಡೆಸಿದ ಪಕ್ಷದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಪಕ್ಷವನ್ನು ತಳಮಟ್ಟದಿಂದ ಕಟ್ಟೋಣ. ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ, ವಿಧಾನಸಭಾ ಚುನಾವಣೆಗೆ ಅಣಿಯಾಗಿ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡೋಣ ಎಂದರು.
ವೀಕ್ಷಕರಾಗಿ ಆಗಮಿಸಿದ್ದ ಯಾದಗಿರಿ ಜಿಲ್ಲಾ ಕಾಂಗ್ರೆಸ್ ಮುಖಂಡ ಭೀಮಣ್ಣ ಮೇಟಿ ಹಾಗೂ ಬಸವರಾಜ ಭಂಗಿ ಕೋಳೂರ ಅವರನ್ನು ಸನ್ಮಾನಿಸಲಾಯಿತು.
ಬ್ಲಾಕ್ ಕಾಂಗ್ರೆಸ್ ಎಸ್ಟಿ ಮೋರ್ಚಾ ಅಧ್ಯಕ್ಷ ತಿಮ್ಮಪ್ಪ ನಾಯಕ, ಚನ್ನವೀರಯ್ಯ ಸ್ವಾಮಿ ಹಿರೇಮಠ, ಆಲ್ಕೋಡ ಗ್ರಾ.ಪಂ. ಉಪಾಧ್ಯಕ್ಷ ಹನುಮಂತ ಶಾವಂತಗಲ್, ಮುಖಂಡರಾದ ಪರಶುರಾಮ, ಮಲ್ಲೇಶ ಜಾನಮರಡಿ, ಭಗಯ್ಯ, ಭೀಮಣ್ಣ ನಾಯಕ, ಭಗವಂತ್ರಾಯ ತಾತೆ, ಅಹ್ಮದ್ ಬಡಿಗೇರಾ,ರಂಗಪ್ಪ ಕೊತ್ವಾಲ್, ಅನೀಫ್, ಇಕ್ಬಲ್, ಯುಸೂಫ್, ಬಸವರಾಜ ಮರಕಂದಿನ್ನಿ ಹಾಗೂ ಲಿಂಗಣ್ಣ ಹವಾಲ್ದಾರ್ ಸೇರಿ ಹಲವರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.