ರಾಯಚೂರು: ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ ಆರು ಮಂದಿಗೆ ಕೋವಿಡ್ ದೃಢವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವವ ಸಂಖ್ಯೆ 111 ರಷ್ಟಾಗಿದೆ.
ಇದುವರೆಗೂ ಜಿಲ್ಲೆಯಲ್ಲಿ 517 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದಂತಾಗಿದ್ದು, ಅವರಲ್ಲಿ ಚಿಕಿತ್ಸೆ ಪಡೆದು 404 ಜನರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.
ಜಿಲ್ಲೆಯಿಂದ ಶುಕ್ರವಾರ ಒಟ್ಟು 375 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದೂವರೆಗೆ 24,445 ಜನರ ಗಂಟಲಿನ ದ್ರವ ಮಾದರಿಯನ್ನು ಕೊರೊನಾ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಅವುಗಳಲ್ಲಿ 22,364 ವರದಿಗಳು ನೆಗೆಟಿವ್ ಆಗಿವೆ. ಇನ್ನುಳಿದ 1,558 ಮಾದರಿಗಳ ಫಲಿತಾಂಶ ಬರಬೇಕಿದೆ.
ರಾಯಚೂರು ತಾಲ್ಲೂಕಿನ ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ 118, ಸಿಂಧನೂರು ತಾಲ್ಲೂಕು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ 14, ಮಾನ್ವಿ ತಾಲೂಕು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ 22 ಹಾಗೂ ಲಿಂಗಸೂಗೂರು ತಾಲ್ಲೂಕು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ 21 ಜನರು ಸೇರಿದಂತೆ ಒಟ್ಟು 175 ಜನರನ್ನು ಸಾಂಸ್ಥಿಕ ಕ್ವಾರೆಂಟೈನ್ನಲ್ಲಿ ಇರಿಸಿ ನಿಗಾವಹಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.