ರಾಯಚೂರು: ಜಿಲ್ಲೆಯ ಒಪೆಕ್ ಆಸ್ಪತ್ರೆಯಲ್ಲಿ ಸರ್ಕಾರಿ ಕ್ವಾರಂಟೈನ್ನಲ್ಲಿದ್ದ ದೇವದುರ್ಗ ತಾಲ್ಲೂಕು ಕೊತ್ತದೊಡ್ಡಿ ಗ್ರಾಮದ ಶಿವಪ್ಪ ಬಲಿದೇವ (52) ಶುಕ್ರವಾರ ಮೃತಪಟ್ಟಿದ್ದಾರೆ.
ಮುಂಬೈನಿಂದ ಮರಳಿದ್ದ ಅವರನ್ನು ಕೊತ್ತದೊಡ್ಡಿಯ ಕಸ್ತೂರಿಬಾ ವಸತಿ ಶಾಲೆಯಲ್ಲಿ ಸಾಂಸ್ಥಿಕ ಕ್ವಾರಂಟೈನ್ ಇರಿಸಲಾಗಿತ್ತು. ರೋಗದ ಲಕ್ಷಣಗಳು ಕಂಡುಬಂದಿದ್ದರಿಂದ ಒಪೆಕ್ಗೆ ಸ್ಥಳಾಂತರಿಸಿ, ಗಂಟಲು ದ್ರುವವನ್ನು ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ನೆಗೆಟಿವ್ ವರದಿ ಬಂದಿದೆ.
ಇದೀಗ ಮತ್ತೆ ಗಂಟಲು ದ್ರುವ ಸಂಗ್ರಹಿಸಿ ಬಳ್ಳಾರಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಸಂಜೆಯೊಳಗಾಗಿ ವರದಿ ಬರಲಿದೆ ಎಂದು ತಿಳಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.