ADVERTISEMENT

ಕೋವಿಡ್‌ನಿಂದ ಗುಣಮುಖರಾದ 157 ಮಂದಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 16:03 IST
Last Updated 21 ಸೆಪ್ಟೆಂಬರ್ 2020, 16:03 IST

ರಾಯಚೂರು:ಜಿಲ್ಲೆಯಲ್ಲಿ ಸೋಮವಾರ ಮತ್ತೆ 60 ಜನರಿಗೆ ಕೋವಿಡ್‌ ದೃಢವಾಗಿದೆ.ಇದೇ ವೇಳೆ,ಕೋವಿಡ್‌ನಿಂದ ಗುಣಮುಖರಾಗಿದ್ದ157 ಜನರನ್ನು ಬಿಡುಗಡೆ ಮಾಡಲಾಗಿದೆ. ಸದ್ಯ 1,644 ಸಕ್ರಿಯ ಪ್ರಕರಣಗಳಿವೆ.

ಇದುವರೆಗೂ ಒಟ್ಟು 10,507 ಸೋಂಕಿತರು ಪತ್ತೆಯಾಗಿದ್ದಾರೆ. ಅದರಲ್ಲಿ ಗುಣಮುಖರಾದವರು ಒಟ್ಟು 8,731 ಜನರು. ಕೋವಿಡ್‌ನಿಂದ ಮತ್ತೆ ಇಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ ಒಟ್ಟು 132 ಕ್ಕೆ ಏರಿಕೆ ಆಗಿದೆ.

ಗಂಭೀರ ಸ್ಥಿತಿಯಲ್ಲಿದ್ದ 7 ಜನರನ್ನು ಒಪೆಕ್‌ಗೆ ದಾಖಲಿಸಲಾಗಿದ್ದು, ಒಟ್ಟು 342 ಜನರು ಆಸ್ಪತ್ರೆಯಲ್ಲಿದ್ದಾರೆ. ಒಟ್ಟು195 ಮಾದರಿಗಳ ವರದಿ ಬರಬೇಕಿದೆ. ಇದುವರೆಗೂ ಒಟ್ಟು 1,46,625 ಜನರಿಂದ ಗಂಟಲು ದ್ರವ ಸಂಗ್ರಹಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.