ADVERTISEMENT

ಡಿ.1 ರಿಂದ ಬೆಳೆಹಾನಿ ಪರಿಹಾರ: ಸಚಿವ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2021, 11:06 IST
Last Updated 24 ನವೆಂಬರ್ 2021, 11:06 IST

ರಾಯಚೂರು: ‘ಮಳೆಯಿಂದ ಜಿಲ್ಲೆಯಲ್ಲಿ ಹಾನಿಯಾದ ಬೆಳೆ ಸಮೀಕ್ಷಾ ಕಾರ್ಯ ನವೆಂಬರ್ 30ರೊಳಗೆ ಮುಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಡಿಸೆಂಬರ್ 1 ರಿಂದ ರೈತರಿಗೆ ಪರಿಹಾರ ನೀಡುವುದಕ್ಕೆ ತಿಳಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಹೇಳಿದರು

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ 34 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದ ಭತ್ತ ನಾಶವಾಗಿದೆ. ಒಟ್ಟು 49,953 ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಇದರಿಂದ ಈ ವರ್ಷ ಮಳೆಯಿಂದಾಗಿ ರೈತರು ಬೆಳೆ ಮುಟ್ಟದಂತಹ ಪರಿಸ್ಥಿತಿಯಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಪರಿಹಾರಕ್ಕೆ ಮನವಿ ಮಾಡಿದ್ದೇವೆ ಎಂದರು.

‘ವಿಧಾನ ಪರಿಷತ್ ಚುನಾವಣೆಯಲ್ಲಿ ರಾಯಚೂರಿನಲ್ಲಿ ನಾವೇ ಗೆಲ್ಲುತ್ತೇವೆ. ನಮ್ಮ ನಾಯಕರು ಸೂಚಿಸಿದ ಅಭ್ಯರ್ಥಿಯನ್ನು ಗೆಲ್ಲಿಸುವುದು ನಮ್ಮ ಗುರಿ’ ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.