ADVERTISEMENT

ರಾಯಚೂರು: ಸಿಲಿಂಡರ್ ಸ್ಫೋಟ, ಮನೆ ವಸ್ತು ಕರಕಲು

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2019, 6:04 IST
Last Updated 20 ನವೆಂಬರ್ 2019, 6:04 IST
   

ರಾಯಚೂರು: ಜಿಲ್ಲೆಯ ಮಸ್ಕಿ ತಾಲ್ಲೂಕಿನ ಕಣೂರು ಗ್ರಾಮದ ಚಿದಾನಂದ ಸಿಂಗ್ ಅವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಕಾಣಿಸಿಕೊಂಡು,‌ ಆನಂತರ ಮನೆಯಲ್ಲಿದ್ದ ಎರಡು ಸಿಲಿಂಡರುಗಳು ಸ್ಫೋಟಗೊಂಡ ಘಟನೆ ಮಂಗಳವಾರ ರಾತ್ರಿ‌ ನಡೆದಿದೆ.

ಘಟನೆಯಲ್ಲಿ ಯಾವುದೇ ಜೀವಹಾನಿಯಾಗಿಲ್ಲ. ಮನೆಯಲ್ಲಿದ್ದ ವಯೋವೃದ್ಧೆಯೊಬ್ಬರು ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಎರಡು ಸಿಲಿಂಡರಿನ ಸ್ಫೋಟದಿಂದ ಆತಂಕಕ್ಕೊಳಗಾದ ಗ್ರಾಮಸ್ಥರು ಕೆಲಕಾಲ ಗ್ರಾಮದಿಂದ ಹೊರಗೆ ಓಡಿ ಹೋಗಿದ್ದಾರೆ.

ADVERTISEMENT

ತುರ್ವಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.