ADVERTISEMENT

ಬಿಡುವಿಲ್ಲದೆ ದುಡಿದ ಪೌರಕಾರ್ಮಿಕರು: ಜಯಣ್ಣ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2020, 14:25 IST
Last Updated 14 ನವೆಂಬರ್ 2020, 14:25 IST
ರಾಯಚೂರಿನ ಶ್ರೀಸಾಯಿ ಮಂದಿರ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಪೌರಕಾರ್ಮಿಕರಿಗೆ ಅಗತ್ಯ ದಿನಬಳಕೆ ವಸ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ಜಯಣ್ಣ ಹಾಗೂ ದೇವಸ್ಥಾನ ಸಮಿತಿಯವರು ವಸ್ತುಗಳನ್ನು ವಿತರಿಸಿದರು
ರಾಯಚೂರಿನ ಶ್ರೀಸಾಯಿ ಮಂದಿರ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಪೌರಕಾರ್ಮಿಕರಿಗೆ ಅಗತ್ಯ ದಿನಬಳಕೆ ವಸ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ನಗರಸಭೆ ಸದಸ್ಯ ಜಯಣ್ಣ ಹಾಗೂ ದೇವಸ್ಥಾನ ಸಮಿತಿಯವರು ವಸ್ತುಗಳನ್ನು ವಿತರಿಸಿದರು   

ರಾಯಚೂರು:ಕೊರೊನಾ ಸಂಕಷ್ಟದ ಸಮಯದಲ್ಲೂ ಪೌರಕಾರ್ಮಿಕರು ನಿಷ್ಠೆಯಿಂದ ಬಿಡುವಿಲ್ಲದೆ ದುಡಿಮೆ ಮಾಡಿರುವುದು ಅನನ್ಯವಾಗಿದೆ ಎಂದು ನಗರಸಭೆ ಸದಸ್ಯ ಜಯಣ್ಣ ಹೇಳಿದರು.

ನಗರದ ಶ್ರೀಸಾಯಿ ಮಂದಿರ ಆವರಣದಲ್ಲಿ ಇನ್ಫೋಸಿಸ್‌ ಫೌಂಡೇಷನ್‌, ಪಾವಗಡದ ರಾಮಕೃಷ್ಣ ಆಶ್ರಮ, ಭಾರತೀಯ ರೆಡ್‌ಕ್ರಾಸ್‌ ಸಂಸ್ಥೆ ಸಹಯೋಗದಲ್ಲಿ ಶನಿವಾರ ಏರ್ಪಡಿಸಿದ್ದ ಪೌರಕಾರ್ಮಿಕರಿಗೆ ಅಗತ್ಯ ದಿನಬಳಕೆ ವಸ್ತುಗಳ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರ್ಕಾರ ಯಾವುದೇ ಮನ್ಸೂಚನೆ ನೀಡದೆ ಲಾಕ್‌ಡೌನ್‌ ಘೋಷಿಸಿದ್ದರಿಂದ ಎಲ್ಲರೂ ಸಂಕಷ್ಟ ಎದುರಿಸುವಂತಾಯಿತು. ಪೌರಕಾರ್ಮಿಕರು ಸವಾಲುಗಳ ಮಧ್ಯೆಯೂ ಕೆಲಸ ಮಾಡಿದ್ದಾರೆ ಎಂದರು.

ADVERTISEMENT

ಕಿರಣ ಆದೋನಿ, ಹರೀಶ ನಾಡಗೌಡ, ಡಿಂಗ್ರಿ ನರೇಶ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.