ADVERTISEMENT

ಮಂತ್ರಾಲಯ: ದರ್ಶನಕ್ಕೆ ಅವಕಾಶ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2020, 20:38 IST
Last Updated 2 ಅಕ್ಟೋಬರ್ 2020, 20:38 IST
ವೃಂದಾವನ ದರ್ಶನ ಪಡೆಯುವುದಕ್ಕಾಗಿ ಮಂತ್ರಾಲಯ ಮಠದ ಹೊರಗಡೆ ಭಕ್ತರು ಸರದಿಯಲ್ಲಿ ನಿಂತಿದ್ದರು
ವೃಂದಾವನ ದರ್ಶನ ಪಡೆಯುವುದಕ್ಕಾಗಿ ಮಂತ್ರಾಲಯ ಮಠದ ಹೊರಗಡೆ ಭಕ್ತರು ಸರದಿಯಲ್ಲಿ ನಿಂತಿದ್ದರು   

ರಾಯಚೂರು:ಮಂತ್ರಾಲಯದ ರಾಘವೇಂದ್ರ ಸ್ವಾಮಿ ಮಠದಲ್ಲಿ ಭಕ್ತರಿಗೆ ದರ್ಶನ ಪಡೆಯಲು ಶುಕ್ರವಾರದಿಂದ ಅವಕಾಶ ಕಲ್ಪಿಸಲಾಗಿದೆ.

ಮಠದ ಮುಂಭಾಗದಲ್ಲಿ ಅಂತರ ಕಾಯ್ದುಕೊಂಡು ಸರದಿಯಲ್ಲಿ ನಿಲ್ಲುವುದಕ್ಕೆ ವ್ಯವಸ್ಥೆ ಇದ್ದು, ಸಾಮಾನ್ಯ ದರ್ಶನಕ್ಕೆ ಮಾತ್ರ ಅವಕಾಶವಿದೆ. ವಿಐಪಿ ದರ್ಶನ ಇನ್ನೂ ಆರಂಭಿಸಿಲ್ಲ.

ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥರು ಮಹಾದ್ವಾರವನ್ನು ತೆರೆದು, ಭಕ್ತರು ದರ್ಶನ ಪಡೆಯಲು ಅನುವು ಮಾಡಿದರು. ಬೆಳಿಗ್ಗೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆದವು. ಕೊರೊನಾ ಸೋಂಕು ತಡೆಯ ಮುನ್ನಚ್ಚರಿಕೆ ಕ್ರಮವಾಗಿ ಮಾರ್ಚ್‌ನಿಂದ ದರ್ಶನ ನಿರ್ಬಂಧಿಸಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.