ಮಸ್ಕಿ: ದೀಪಾವಳಿಯ ಬಲಿಪಾಡ್ಯಮಿಯನ್ನು ಶುಕ್ರವಾರ ಪಟ್ಟಣದ ಭ್ರಮರಾಂಬಾ ದೇವಸ್ಥಾನದಲ್ಲಿ ಶಾಸಕ ಆರ್. ಬಸನಗೌಡ ತುರ್ವಿಹಾಳ ಅವರು ಗೋವಿಗೆ ಪೂಜೆ ಸಲ್ಲಿಸುವ ಮೂಲಕ ಆಚರಿಸಿದರು.
ಬೆಳಿಗ್ಗೆ ದೇವಸ್ಥಾನಕ್ಕೆ ಆಗಮಿಸಿದ ಶಾಸಕರು, ಭ್ರಮರಾಂಬಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಗೋವಿಗೆ ವಿಭೂತಿ, ಕುಂಕಮ ಹಚ್ಚಿ ಪೂಜೆ ಸಲ್ಲಿಸಿದರು.
ದೀಪಾವಳಿಯು ಸರ್ವರ ಬಾಳಿನಲ್ಲಿ ಬೆಳಕು ತರಲಿ ಎಂದು ಇದೇ ಶುಭ ಹಾರೈಸಿದರು. ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಣ್ಣ ನಾಯಕ ಸೇರಿದಂತೆ ಮುಖಂಡರು ಹಾಗೂ ದೇವಸ್ಥಾನ ಸಮಿತಿ ಅರ್ಚಕರು ಇದ್ದರು.
ಉದ್ಬಾಳದಲ್ಲಿ ಗೋವು ಪೂಜೆ : ತಾಲ್ಲೂಕಿನ ಉದ್ಬಾಳ ಗ್ರಾಮದಲ್ಲಿ ಮುಜುರಾಯಿ ಇಲಾಖೆಗೆ ಸೇರಿದ ದೇವಸ್ಥಾನದಲ್ಲಿ ಗೋ ಪೂಜೆ ನಡೆಸಲಾಯಿತು. ಬಳಗಾನೂರು ಪಟ್ಟಣದ ಮಾರುತಿ ದೇವಸ್ಥಾನದಲ್ಲಿ ಗೋವು ಪೂಜಾ ಕಾರ್ಯಕ್ರಮ ನಡೆಯಿತು. ತಹಶೀಲ್ದಾರ್ (ಗ್ರೇಡ್-2) ಪ್ರಭಾಕರ್ ಭಟ್, ದೇವಸ್ಥಾನ ಸಮಿತಿ ಅರ್ಚಕ ರಂಗನಾಥ ಪೂಜಾರ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.