ADVERTISEMENT

ರಾಯಚೂರು: ಏಮ್ಸ್ ಹೋರಾಟ 1140ನೇ ದಿನಕ್ಕೆ ಪದಾರ್ಪಣೆ

​ಪ್ರಜಾವಾಣಿ ವಾರ್ತೆ
Published 25 ಜೂನ್ 2025, 13:59 IST
Last Updated 25 ಜೂನ್ 2025, 13:59 IST
ರಾಯಚೂರಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಬುಧವಾರ ಜಿಲ್ಲಾ ಏಮ್ಸ್ ಹೋರಾಟ ಸಮಿತಿ ಸದಸ್ಯರು ಅನಿರ್ದಿಷ್ಟಾವಧಿ ಧರಣಿ ನಡೆಸಿದರು
ರಾಯಚೂರಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಬುಧವಾರ ಜಿಲ್ಲಾ ಏಮ್ಸ್ ಹೋರಾಟ ಸಮಿತಿ ಸದಸ್ಯರು ಅನಿರ್ದಿಷ್ಟಾವಧಿ ಧರಣಿ ನಡೆಸಿದರು    

ರಾಯಚೂರು: ಜಿಲ್ಲಾ ಏಮ್ಸ್ ಹೋರಾಟ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಬುಧವಾರ 1140ನೇ ದಿನಕ್ಕೆ ಪದಾರ್ಪಣೆ ಮಾಡಿದೆ.

ರಾಜ್ಯ ಸರ್ಕಾರದ ಶಿಫಾರಸ್ಸಿಗೆ ಗೌರವ ನೀಡಿ, ಏಮ್ಸ್ ಆರೋಗ್ಯ ಸಂಸ್ಥೆಗಾಗಿ ನಡೆಯುತ್ತಿರುವ ಸುಧೀರ್ಘ ಹೋರಾಟಕ್ಕೆ ಸ್ಪಂದಿಸಿ ಶೀಘ್ರದಲ್ಲಿಯೇ ರಾಯಚೂರಿಗೆ ಏಮ್ಸ್ ಆರೋಗ್ಯ ಸಂಸ್ಥೆಯನ್ನು ಮಂಜೂರು ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಈ ವೇಳೆ ಬಸವರಾಜ ಕಳಸ, ಅಶೋಕಕುಮಾರ ಜೈನ್, ವಕೀಲ ಎಸ್. ಮಾರೆಪ್ಪ, ಜಾನ್ ವೆಸ್ಲಿ, ನರಸಪ್ಪ ಬಾಡಿಯಲ್, ಕಾಮರಾಜ ಪಾಟೀಲ, ವೀರಭದ್ರಯ್ಯ ಸ್ವಾಮಿ, ಶ್ರೀನಿವಾಸ ನಾಗಲದಿನ್ನಿ, ಜೈ ಭೀಮ್, ವಿನಯ ಕುಮಾರ ಚಿತ್ರಗಾರ, ಜಗದೀಶ ಪೂರತಿಪ್ಲಿ, ಎಸ್.ಎಸ್. ಪಾಟೀಲ, ಶ್ರೀನಿವಾಸ ಆಚಾರ್ ಜೋಶಿ, ರಮೇಶರಾವ್ ಕಲ್ಲೂರ್ಕರ್, ಶರಣಪ್ಪ ಅಸ್ಕಿಹಾಳ, ಅಮರೇಗೌಡ ಪಾಟೀಲ, ಮೆಹಬೂಬ್ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.