ದೇವದುರ್ಗ: ಪಟ್ಟಣದ ಮಿನಿ ವಿಧಾನಸೌಧದಲ್ಲಿ ಕಂದಾಯ ಇಲಾಖೆಯಲ್ಲಿ ಕಂದಾಯ ನಿರೀಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಭೀಮನಗೌಡ ಪಾಟೀಲ ಅವರಿಗೆ ಗುರುವಾರ ಶಾಸಕಿ ಬೆಂಬಲಿಗ, ಜೆಡಿಎಸ್ ಮುಖಂಡ ಶಾಲಂ ಉದ್ದಾರ ಅಶ್ಲೀಲ ಪದಗಳಿಂದ ನಿಂದನೆ ಮಾಡಿ ಹಲ್ಲೆ ಮಾಡಿದ್ದಾರೆ.
ತಹಶೀಲ್ದಾರ್ ಚನ್ನಮಲ್ಲಪ್ಪ ಘಂಟಿ ಅವರಿಗೆ ದೂರು ನೀಡಿದರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎನ್ನುವ ವಿಡಿಯೊ ಮತ್ತು ದೂರಿನ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಜೆಡಿಎಸ್ ಮುಖಂಡ ಹಾಗೂ ಪುರಸಭೆ ಮಾಜಿ ಸದಸ್ಯ ಶಾಲಂ ಅವರು ವಾರ್ಡ್ ನಿಮಾಸಿಯಲ್ಲದ ವ್ಯಕ್ತಿಯೊಬ್ಬರನ್ನು ನಿಯಮ ಬಾಹಿರವಾಗಿ ವಾರ್ಡ್ನ ಮತದಾರರ ಪಟ್ಟಿಯಲ್ಲಿ ಸೇರಿಸಲು ಒತ್ತಾಯಿಸಿ ಹಿನ್ನೆಲೆ ಅಶ್ಲೀಲವಾಗಿ ನಿಂದಿಸಿ ಹಲ್ಲೆ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.