ರಾಯಚೂರು: ಆಷಾಢ ಶುದ್ಧ ಪೂರ್ಣಿಮೆ ದಿನವಾದ ಶನಿವಾರ ಮಂತ್ರಾಲಯದಲ್ಲಿ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಮೃತ್ತಿಕಾ ಸಂಗ್ರಹಣಾ ವಿಧಿ–ವಿಧಾನಗಳನ್ನು ನೆರವೇರಿಸಿದರು.
ತುಂಗಭದ್ರಾ ನದಿ ಪಕ್ಕದಲ್ಲಿರುವ ತುಳಸಿ ವನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಶ್ರೀಗಳು, ತುಳಸಿಗಿಡದ ಕೆಳಗಿನ ಮೃತ್ತಿಕೆಯನ್ನು ಬೆಳ್ಳಿ ಪಾತ್ರೆಯಲ್ಲಿ ಸಂಗ್ರಹಿಸುವ ಕಾರ್ಯನೆರವೇರಿಸಿದರು.
ತುಳಸಿ ವನದಿಂದ ಮಠದವರೆಗೂ ಸುವರ್ಣ ಪಲ್ಲಕ್ಕಿಯಲ್ಲಿ ಮೃತ್ತಿಕೆಯನ್ನು ಮೆರವಣಿಗೆ ಮೂಲಕ ತರಲಾಯಿತು. ಬಳಿಕ ಧಾರ್ಮಿಕ ನಿಯಮಾನುಸಾರ ಮೃತ್ತಿಕೆಯನ್ನು ರಾಯರ ಮೂಲ ವೃಂದಾವನದ ಮೇಲೆ ಇರಿಸಲಾಯಿತು.
ಮಠದ ಸಿಬ್ಬಂದಿ ಹಾಗೂ ಭಕ್ತರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.