ADVERTISEMENT

ಆರೋಗ್ಯ ಸಚಿವರ ಸಭೆಯಲ್ಲಿ ಅನರ್ಹ ಶಾಸಕ!

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2020, 11:00 IST
Last Updated 5 ಏಪ್ರಿಲ್ 2020, 11:00 IST
ಪ್ರತಾಪಗೌಡ ಪಾಟೀಲ
ಪ್ರತಾಪಗೌಡ ಪಾಟೀಲ   

ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಭಾನುವಾರ ಆಯೋಜಿಸಿದ್ದ ಕೋವಿಡ್‌–19 ಮುಂಜಾಗ್ರತಾ ಕ್ರಮಗಳ ಪರಿಶೀಲನೆ ಸಭೆಯಲ್ಲಿ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ ಅವರು ಪಾಲ್ಗೊಂಡು ಶಿಷ್ಟಾಚಾರ ಉಲ್ಲಂಘನೆ ಮಾಡಿದರು

ಸಭೆಯ ವೇದಿಕೆಯಲ್ಲಿ ಆಸೀನರಾದರೂ ಯಾರು ಆಕ್ಷೇಪ ವ್ಯಕ್ತಪಡಿಸಲಿಲ್ಲ. ಸಾಮಾಜಿಕ ಅಂತರ ಕಾಪಾಡುವುದಕ್ಕೆ ವೇದಿಕೆಯಲ್ಲಿ ಸ್ಥಳದ ಅಭಾವ ಇತ್ತಾದರೂ, ಪ್ರತಾಪಗೌಡ ಪಾಟೀಲರು ಇತರೆ ಶಾಸಕರೊಂದಿಗೆ ವೇದಿಕೆ ಹಂಚಿಕೊಂಡು ಗಮನ ಸೆಳೆದರು. ಉಸ್ತುವಾರಿ ಸಚಿವರು ಈ ಬಗ್ಗೆ ಮೌನ ವಹಿಸಿದ್ದರು.

ಪ್ರತಾಪಗೌಡ ಪಾಟೀಲ ಮಾತನಾಡಿ, ಮಸ್ಕಿ ಕ್ಷೇತ್ರದಲ್ಲಿ ಫೀವರ್ ಸೆಂಟರ್ ತೆರೆಯಬೇಕು. ಮಾಸ್ಕ್‌ ವಿತರಿಸಬೇಕು. ತುಂಗಭದ್ರಾ ಎಡದಂಡೆ ನಾಲೆಗೆ ಸಮರ್ಪಕವಾಗಿ ನೀರು ಹರಿಸಲು ಕೋರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.