ADVERTISEMENT

ಡಾ.ರಾಜ್‌ಕುಮಾರ್ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 24 ಏಪ್ರಿಲ್ 2019, 17:18 IST
Last Updated 24 ಏಪ್ರಿಲ್ 2019, 17:18 IST
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಡಾ.ರಾಜ್‌ಕುಮಾರ್‌ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪಮಾಲೆ ಹಾಕಿ ಸರಳವಾಗಿ ಆಚರಿಸಲಾಯಿತು
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಡಾ.ರಾಜ್‌ಕುಮಾರ್‌ ಜಯಂತಿಯನ್ನು ಭಾವಚಿತ್ರಕ್ಕೆ ಪುಷ್ಪಮಾಲೆ ಹಾಕಿ ಸರಳವಾಗಿ ಆಚರಿಸಲಾಯಿತು   

ರಾಯಚೂರು: ವರನಟ ಡಾ.ರಾಜ್‌ಕುಮಾರ್ ಜಯಂತಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.

ತಹಸೀಲ್ದಾರ್‌ ಶೃತಿ ಅವರು ಡಾ.ರಾಜ್ ಕುಮಾರ್‌ರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಎಚ್.ಜಿ.ರವಿರಾಜು, ವಾರ್ತಾ ಸಹಾಯಕ ಸುರೇಶ ಜಿ., ದಂಡಪ್ಪ ಬಿರಾದರ್, ಡಾ. ರಾಜ್‌ಕುಮಾರ್ ಸಂಘದ ಜಿಲ್ಲಾಧ್ಯಕ್ಷ ನರಸಿಂಹಲು ಮೈತ್ರಿಕರ್, ಗೌರವಾಧ್ಯಕ್ಷ ಬಸವರಾಜ್ ಕಳಸ, ಉಪಾಧ್ಯಕ್ಷ ಎಂ.ನಂಜುಂಡ, ಮಾಜಿ ಅಧ್ಯಕ್ಷ ತಮೇಶ, ಜೆ.ಎಲ್.ಕೋಟಿ, ಶಾಂತಕುಮಾರ, ನರಸಪ್ಪ ಮನಿಗೀರ್ ಸೇರಿದಂತೆ ರಾಜ್ ಕುಮಾರ್ ಅಭಿಮಾನಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.