ADVERTISEMENT

ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2019, 14:59 IST
Last Updated 16 ಏಪ್ರಿಲ್ 2019, 14:59 IST

ರಾಯಚೂರು: ನಗರದ ನವೋದಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್‌ ವಿಭಾಗದ ವಿದ್ಯಾರ್ಥಿನಿ ಮಧು ಪತ್ತಾರ (23)ಮಾಣಿಕ್‌ಪ್ರಭು ದೇವಸ್ಥಾನದ ಹಿಂಭಾಗದಲ್ಲಿ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಸೋಮವಾರ ಗೊತ್ತಾಗಿದೆ.

ಪರೀಕ್ಷೆಯಲ್ಲಿ ಪದೇ ಪದೇ ಅನುತ್ತೀರ್ಣಗೊಂಡಿರುವ ಕಾರಣಕ್ಕೆ ಡೆತ್‌ನೋಟ್‌ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಬೆಳಿಗ್ಗೆ ಮನೆಯಿಂದ ತೆರಳಿದ್ದ ವಿದ್ಯಾರ್ಥಿನಿ ಮನೆಗೆ ವಾಪಸ್‌ ಬಂದಿರಲಿಲ್ಲ. ನೇತಾಜಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.