ADVERTISEMENT

ಅಭಿವೃದ್ಧಿಗೆ ಎಂಜಿನಿಯರುಗಳ ಪಾತ್ರ ಮುಖ್ಯ: ಡಾ. ಎಂ.ಜಿ ಪಾಟೀಲ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2021, 14:14 IST
Last Updated 15 ಸೆಪ್ಟೆಂಬರ್ 2021, 14:14 IST
ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಬುಧವಾರ ಆಯೋಜಿಸಿದ್ದ ಎಂಜಿನಿಯರ್ಸ್ ದಿನಾಚರಣೆ ಕಾರ್ಯಕ್ರಮಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕ ಡಾ.ಎಂ.ಜಿ.ಪಾಟೀಲ ಉದ್ಘಾಟಿಸಿ ಮಾತನಾಡಿದರು
ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಬುಧವಾರ ಆಯೋಜಿಸಿದ್ದ ಎಂಜಿನಿಯರ್ಸ್ ದಿನಾಚರಣೆ ಕಾರ್ಯಕ್ರಮಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕ ಡಾ.ಎಂ.ಜಿ.ಪಾಟೀಲ ಉದ್ಘಾಟಿಸಿ ಮಾತನಾಡಿದರು   

ರಾಯಚೂರು: ದೇಶದ ಬೆನ್ನೆಲುಬು ಎಂದು ಕರೆಯುವ ಕೃಷಿ ಕ್ಷೇತ್ರಕ್ಕೆ ಎಂಜಿನಿಯರುಗಳ ಪಾತ್ರ ಮುಖ್ಯವಾಗಿದೆ. ಇವರು ದೇಶ ಸದೃಢಗೊಳ್ಳುವಲ್ಲಿ ಹೊಸ ಕ್ರಾಂತಿಯನ್ನು ಸೃಷ್ಟಿಸಿದ್ದಾರೆ ಎಂದು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಶಿಕ್ಷಣ ನಿರ್ದೇಶಕ ಡಾ.ಎಂ.ಜಿ.ಪಾಟೀಲ ಹೇಳಿದರು.

ನಗರದ ಕೃಷಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಕೃಷಿ ವಿಶ್ವವಿದ್ಯಾಲಯ, ಕೃಷಿ ತಾಂತ್ರಿಕ ಮಹಾವಿದ್ಯಾಲಯದಿಂದ ಬುಧವಾರ ಆಯೋಜಿಸಲಾಗಿದ್ದ ವಿದ್ಯಾರ್ಥಿ ಸಂಘ, ಕನ್ನಡ ಸಂಘ ಮತ್ತು ಅಭಿಯಂತರರ ವಿವಿಧ ಸಂಘಗಳ ಉದ್ಘಾಟನೆ ಹಾಗೂ ಎಂಜಿನಿಯರ್ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕನ್ನಡ ಸಂಘ ಸ್ಥಾಪಿಸಿದ್ದು, ಸರ್ಕಾರ ಹೊರಡಿಸುವ ಕನ್ನಡ ಕಾರ್ಯಕ್ರಮಗಳನ್ನು ಸಂಘ ಜಾರಿಗೆ ತರಬೇಕು. ಕನ್ನಡ ಕುರಿತ ರೂಪುರೇಷೆಗಳನ್ನು ಅನುಷ್ಠಾನಗೊಳಿಸಬೇಕು. ಇದಕ್ಕೆ ವಿಶ್ವವಿದ್ಯಾಲಯದಿಂದ ಅಗತ್ಯ ಸಹಕಾರ‌ನೀಡಲಾಗುವುದು ಎಂದರು. ಲೋಕೇಶ್ವರ ರಾವ್ ಕಾಳೆ ಮಾತನಾಡಿದರು.

ADVERTISEMENT

ಕೃಷಿ ವಿಶ್ವವಿದ್ಯಾಲಯದ ಮುಖ್ಯಸ್ಥ ಡಾ.ಎಂ.ನೇಮಿಚಂದ್ರಪ್ಪ, ಡಾ.ಎಂ.ವೀರನಗೌಡ, ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ಧಾರೂಢ ಬಿ.ಪಾಟೀಲ, ಮಹಾಂತೇಶ ಗಾಣಿಗಿ, ಕರಿಬಸವರಾಜ ಕರಿಗೌಡ್ರು, ಪಿ.ದಿವ್ಯ ಸೇರಿದಂತೆ ಉಪನ್ಯಾಸಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.