ADVERTISEMENT

ಪರಿಸರ ಸಂರಕ್ಷಣೆ ಜಾಗೃತಿ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 3:09 IST
Last Updated 7 ಏಪ್ರಿಲ್ 2021, 3:09 IST
ಸಿರವಾರ ತಾಲ್ಲೂಕಿನ ನವಲಕಲ್ಲು ಗ್ರಾಮದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮಹಿಳಾ ಗ್ರಾಮ ಘಟಕವನ್ನು ರೂಪ ಶ್ರೀನಿವಾಸ ನಾಯಕ ಉದ್ಘಾಟಿಸಿದರು
ಸಿರವಾರ ತಾಲ್ಲೂಕಿನ ನವಲಕಲ್ಲು ಗ್ರಾಮದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮಹಿಳಾ ಗ್ರಾಮ ಘಟಕವನ್ನು ರೂಪ ಶ್ರೀನಿವಾಸ ನಾಯಕ ಉದ್ಘಾಟಿಸಿದರು   

ಪ್ರಜಾವಾಣಿ ವಾರ್ತೆ

ಸಿರವಾರ: 'ಹೊಲಗಳಲ್ಲಿ ಪುರುಷರಿಗಿಂತ ಮಹಿಳೆಯರೇ ಹೆಚ್ಚು ಕೆಲಸ ಮಾಡುತ್ತಿದ್ದು, ಎಲ್ಲಾ ಕ್ಷೇತ್ರಗಳಂತೆ ರೈತ ಕ್ಷೇತ್ರದಲ್ಲೂ ಮಹಿಳೆಯರೇ ಮುಂದೆ ಇದ್ದಾರೆ' ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ಜಿಲ್ಲಾ ಸಂಚಾಲಕಿ ರೂಪಾ ಶ್ರೀನಿವಾಸ ನಾಯಕ ಹೇಳಿದರು.

ತಾಲ್ಲೂಕಿನ ನವಲಕಲ್ಲು ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮಹಿಳಾ ಗ್ರಾಮ ಘಟಕವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ADVERTISEMENT

ತಾಲ್ಲೂಕು ಸಂಚಾಲಕಿ ಅನಿತಾ ಬಸವರಾಜ ಮಂತ್ರಿ ಮಾತನಾಡಿದರು.

ಪ್ರತಿಯೊಬ್ಬ ಮಹಿಳೆಗೆ ಸಸಿ ವಿತರಿಸುವ ಮೂಲಕ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ತಾಲ್ಲೂಕು ಘಟಕದ ಅಧ್ಯಕ್ಷ ನಾಗರಾಜ ಖಾಜನಗೌಡ, ಗ್ರಾಮ ಘಟಕದ ಅಧ್ಯಕ್ಷ ರಾಜಶೇಖರ ಸ್ವಾಮಿ, ನವಲಕಲ್ಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನಿತಾ ಶಿವರಾಜ, ಉಮಾದೇವಿ ನಾಯಕ, ರಾಜ ಮಡಿವಾಳ, ನಾಗರಾಜ, ವಿಜಯ ಬಡಿಗೇರ, ಲಕ್ಷ್ಮಣ್ ಹಾಗೂ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.