ADVERTISEMENT

ಪರಿಸರ ಸಂರಕ್ಷಣೆ ಎಲ್ಲರ ಹೊಣೆ: ಡಾ.ಬಸವಪ್ರಭು ಪಾಟೀಲ್

ಮಾನ್ವಿ: ವನಸಿರಿ ಫೌಂಡೇಶನ್ ವತಿಯಿಂದ ‘ಏಪ್ರಿಲ್ ಕೂಲ್’ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2022, 12:37 IST
Last Updated 1 ಏಪ್ರಿಲ್ 2022, 12:37 IST
ಮಾನ್ವಿಯಲ್ಲಿ ಶುಕ್ರವಾರ ವನಸಿರಿ ಫೌಂಡೇಶನ್ ವತಿಯಿಂದ ಸಾರ್ವಜನಿಕರಿಗೆ ಪಕ್ಷಿಗಳ ಕುಡಿಯುವ ನೀರಿನ ಅರವಟಿಗೆಗಳನ್ನು ಉಚಿತವಾಗಿ ವಿತರಿಸಲಾಯಿತು
ಮಾನ್ವಿಯಲ್ಲಿ ಶುಕ್ರವಾರ ವನಸಿರಿ ಫೌಂಡೇಶನ್ ವತಿಯಿಂದ ಸಾರ್ವಜನಿಕರಿಗೆ ಪಕ್ಷಿಗಳ ಕುಡಿಯುವ ನೀರಿನ ಅರವಟಿಗೆಗಳನ್ನು ಉಚಿತವಾಗಿ ವಿತರಿಸಲಾಯಿತು   

ಮಾನ್ವಿ: ‘ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹೊಣೆಯಾಗಿದೆ. ಪರಿಸರ, ಪ್ರಾಣಿ ಹಾಗೂ ಪಕ್ಷಿಗಳ ಸಂರಕ್ಷಣೆ ಕುರಿತು ಜನಜಾಗೃತಿಗಾಗಿ ಏಪ್ರಿಲ್ ಫೂಲ್ ಬದಲಿಗೆ ಏಪ್ರಿಲ್ ಕೂಲ್ ದಿನಾಚರಣೆಗೆ ಮುಂದಾಗಿರುವ ವನಸಿರಿ ಫೌಂಡೇಶನ್ ಪದಾಧಿಕಾರಿಗಳ ಕಾರ್ಯ ಶ್ಲಾಘನೀಯ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ಬಸವಪ್ರಭು ಪಾಟೀಲ್ ಬೆಟ್ಟದೂರು ಹೇಳಿದರು.

ಶುಕ್ರವಾರ ಪಟ್ಟಣದ ಪಂಪಾ ಉದ್ಯಾನದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಏಪ್ರಿಲ್ ಕೂಲ್ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ‘ ಮನುಷ್ಯರಂತೆ ಎಲ್ಲಾ ಪ್ರಾಣಿ, ಪಕ್ಷಿಗಳು ಸಹ ಭೂಮಿಯ ಮೇಲೆ ಜೀವಿಸುವ ಸಮಾನ ಹಕ್ಕು ಹೊಂದಿವೆ. ಅಳಿವಿನ ಅಂಚಿನಲ್ಲಿರುವ ಪ್ರಾಣಿ, ಪಕ್ಷಿಗಳಿಗಾಗಿ ಆಹಾರ, ನೀರಿನ ವ್ಯವಸ್ಥೆ ಮಾಡುವುದು ಎಲ್ಲರ ಕರ್ತವ್ಯ. ಈ ನಿಟ್ಟಿನಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಎಲ್ಲೆಡೆ ಕುಡಿಯವ ನೀರಿನ ಅರವಟಿಗೆಗಳ ವ್ಯವಸ್ಥೆ ಕಲ್ಪಿಸುತ್ತಿರುವುದು ಉತ್ತಮ ಕಾರ್ಯ’ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ವನಸಿರಿ ಫೌಂಡೇಶನ್ ವತಿಯಿಂದ ತಯಾರಿಸಲಾದ ಪಕ್ಷಿಗಳು ನೀರು ಕುಡಿಯಲು ತಯಾರಿಸಲಾದ ಮಣ್ಣಿನ ಅರವಟಿಗೆ(ಮಡಕೆ) ಹಾಗೂ ಸಸಿಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಯಿತು.

ADVERTISEMENT

ತಾ.ಪಂ ಮಾಜಿ ಅಧ್ಯಕ್ಷ ರಾಜಾವಸಂತ ನಾಯಕ, ವಲಯ, ಅರಣ್ಯಾಧಿಕಾರಿ ರಾಜೇಶ ನಾಯಕ, ಪುರಸಭೆ ಸದಸ್ಯ ರೇವಣಸಿದ್ದಯ್ಯ, ಪುರಸಭೆಯ ಮುಖ್ಯಾಧಿಕಾರಿ ಗಂಗಾಧರ, ವನಸಿರಿ ಫೌಂಡೇಶನ್ ತಾಲ್ಲೂಕು ಅಧ್ಯಕ್ಷ ಶರಣಬಸವ ಭೋವಿ ಹಿರೆಕೊಟ್ನೇಕಲ್, ಪ್ರಧಾನ ಕಾರ್ಯದರ್ಶಿ ವೀರೇಶ ಪಿರುಮಾಳ್, ಉಪಾಧ್ಯಕ್ಷ ಬಸವರಾಜ ನಸಲಾಪುರ, ಇತರ ಪದಾಧಿಕಾರಿಗಳಾದ ರಾಘವೇಂದ್ರ ದಾನಿ ಹಾಗೂ ರಾಘವೇಂದ್ರ ಬದಿ, ಪಿ.ತಿಪ್ಪಣ್ಣ ಬಾಗಲವಾಡ, ರವಿಗೌಡ ಖರಾಬದಿನ್ನಿ, ಪಿ.ಪರಮೇಶ,ರಮೇಶಬಾಬು ಯಾಳಗಿ, ಸಲಾವುದ್ದೀನ್ ಗುತ್ತೇದಾರ, ಡಾ.ಶರಣಬಸವ, ಮಾರೆಪ್ಪ ದೊಡ್ಡಮನಿ, ಹನುಮಂತ ಜಾನೇಕಲ್ ಮತ್ತಿತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.