ರಾಯಚೂರು: ‘ರಾಜ್ಯದಲ್ಲಿ ಶಿರಾ, ರಾಜರಾಜೇಶ್ವರಿ ನಗರ ಸೇರಿದಂತೆ ಕೆಲವು ಕಡೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುತ್ತದೆ ಎನ್ನುವ ಮನ್ಸೂಚನೆ ಅರಿತು, ಕಾಂಗ್ರೆಸ್ ರಾಜ್ಯಾದ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆದಿದೆ’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ ಬಿಜೆಪಿ ವಾಮಮಾರ್ಗದಿಂದ ಚುನಾವಣೆ ಗೆಲ್ಲುವುದಕ್ಕೆ ಕುತಂತ್ರ ನಡೆಸಿದೆ. ಆಡಳಿತ ನಡೆಸುವ ಪಕ್ಷದ ಏಜೆಂಟ್ರಂತೆ, ಪಂಜರದ ಗಿಳಿಯಂತೆ ಸಿಬಿಐ ಅಧಿಕಾರಿಗಳು ವರ್ತಿಸಬಾರದು. ಎಲ್ಲ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ’ ಎಂದರು.
‘ಮಸ್ಕಿ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆ ಎದುರಿಸುವುದಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.