ADVERTISEMENT

ರಾಯಚೂರು: ಬೈಕ್‌ಗೆ ಸರ್ಕಾರಿ ಬಸ್ ಡಿಕ್ಕಿ, ತಂದೆ - ಮಗ ಸ್ಥಳದಲ್ಲೇ ಸಾವು

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2022, 7:25 IST
Last Updated 14 ಸೆಪ್ಟೆಂಬರ್ 2022, 7:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹಟ್ಟಿ ಚಿನ್ನದ ಗಣಿ (ರಾಯಚೂರು ಜಿಲ್ಲೆ): ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ರೋಡಲಬಂಡ ಕ್ರಾಸ್ ಬಳಿ ಬೈಕ್‌ಗೆಸರ್ಕಾರಿ ಬಸ್ ಡಿಕ್ಕಿಯಾಗಿ ತಂದೆ- ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ವಂದಲಿ ಹೊಸೂರು ಗ್ರಾಮದ ರಮೇಶ (45) ಹಾಗೂ ಅಮರೇಶ (12) ಮೃತ ತಂದೆ ಮಗ. ಹೋಲದಲ್ಲಿ ಕೆಲಸ ಮಾಡಿ ಬೈಕ್ ಮೂಲಕ ಮುಖ್ಯ ರಸ್ತೆ ಗೆ ಬರುವಾಗ ಹಟ್ಟಿ ಪಟ್ಟಣದಿಂದ ಬರುತ್ತಿದ್ದ ಸಾರಿಗೆ ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ‌ ರಭಸಕ್ಕೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.