ADVERTISEMENT

ರಾಯಚೂರು | ಹಣ ಕೊಡಲಿಲ್ಲ ಎಂದು ತಂದೆ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪುತ್ರ

​ಪ್ರಜಾವಾಣಿ ವಾರ್ತೆ
Published 30 ಮೇ 2020, 8:56 IST
Last Updated 30 ಮೇ 2020, 8:56 IST

ರಾಯಚೂರು: ಹಣ ಕೊಡಲಿಲ್ಲ ಎನ್ನುವ ಕಾರಣಕ್ಕೆ ಮಾರಕಾಸ್ತ್ರದಿಂದ ತಂದೆಯ ಮೇಲೆ ಪುತ್ರ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಮುಳ್ಳೂರು ಇಜೆ ಗ್ರಾಮದಲ್ಲಿ ನಡೆದಿದೆ.

ಪಿಎಲ್‌ಡಿ ಬ್ಯಾಂಕ್‌ ನಿರ್ದೇಶಕ ದೇವರೆಡ್ಡಿ ಅವರು ಪುತ್ರ ವೀರೇಶನಿಂದ ಹಲ್ಲೆಗೊಳಗಾಗಿದ್ದು, ಸಿಂಧನೂರಿನ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳ್ಳಾರಿ ವಿಮ್ಸ್‌ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆಯಲ್ಲಿ ಕಿವಿ ಮತ್ತು ಕೈಗೆ ಗಾಯಗಳಾಗಿವೆ. ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT