ರಾಯಚೂರು: ನಗರದ ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗುವ ರೋಗಿಗಳ ಸಂಬಂಧಿಗಳಿಗೆ ಉಚಿತವಾಗಿ ಆಹಾರ ಒದಗಿಸುವ ವಾಹನವನ್ನು ಇಫಾ ಫೌಂಡೇಷನ್ನಿಂದ ಆರಂಭಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಅವರು ಶನಿವಾರ ಚಾಲನೆ ನೀಡಿದರು.
ಆಸ್ಪತ್ರೆಯ ಆವರಣದಲ್ಲಿದ್ದ ರೋಗಿಗಳ ಸಂಬಂಧಿಗಳಿಗೆ ಊಟ ನೀಡುವ ಮೂಲಕ ಯೋಜನೆ ಆರಂಭಿಸಲಾಯಿತು. ಈ ಕುರಿತು ಮಾತನಾಡಿದ ಅವರು, ‘ಒಂದು ತುತ್ತು ಅನ್ನ ಸಿಗದೆ ಅದೆಷ್ಟೋ ಜನ ಉಪವಾಸದಿಂದ ಬದುಕುತ್ತಾರೆ. ಈ ಭೂಮಿ ಮೇಲೆ ಜನಸಿದ ನಾವೆಲ್ಲರೂ ಹಂಚಿಕೊಂಡು ತಿನ್ನಬೇಕೆ ವಿನಃ ಯಾರು ಉಪವಾಸ ಇರುವ ಸ್ಥಿತಿ ಇರಬಾರದು. ಆ ನಿಟ್ಟಿನಲ್ಲಿ ಇಫಾ (ಇಎಫ್ಎ) ಫೌಂಡೇಶನ್ ಮಾಡುವ ಈ ಕಾರ್ಯ ಶ್ಲಾಘನೀಯವಾದದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.