ರಾಯಚೂರು: ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಜೂನ್ 16 ರಿಂದ 21 ರವರೆಗೂ ಪತಂಜಲಿ ಯೋಗ ಸಮಿತಿಯಿಂದ ಉಚಿತವಾಗಿ ಯೋಗ, ಪ್ರಾಣಾಯಮ ಶಿಬಿರ ಆಯೋಜಿಸಲಾಗಿದೆ ಎಂದು ಸಮಿತಿಯ ಜಿಲ್ಲಾ ಸಂಚಾಲಕ ವಿಠೋಬರಾವ್ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಎಲ್ವಿಡಿ ಕಾಲೇಜು ಮೈದಾನದಲ್ಲಿ ಬೆಳಿಗ್ಗೆ 5.30 ರಿಂದ 7 ರವರೆಗೂ ಶಿಬಿರ ನಡೆಯುವುದು. ನ್ಯಾಯಾಧೀಶ ಬೈಲೂರು ಶಂಕರರಾಮ ಅವರು ಶಿಬಿರ ಉದ್ಘಾಟನೆ ಮಾಡುವರು. ಯೋಗದಿಂದ ಆರೋಗ್ಯ ಸುಧಾರಣೆಗೆ ಆಗುವ ಅನುಕೂಲಗಳ ಬಗ್ಗೆ ಜನರಿಗೆ ಅರಿವಿದೆ. ಮನಸ್ಸಿನ ಶುದ್ಧಿ, ಧನಾತ್ಮಕ ವಿಚಾರಗಳನ್ನು ಬೆಳೆಸಿಕೊಳ್ಳಲು ಯೋಗವು ಸಹಕಾರಿಯಾಗಿದೆ ಎಂದು ತಿಳಿಸಿದರು.
ರಾಜಶೇಖರ, ಗೋವಿಂದ, ಅಂಜನಾ, ಬ್ರಹ್ಮಗಣೇಶ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.