ಸಿರವಾರ: ಪಟ್ಟಣದ ಬಸವಲಿಂಗಪ್ಪ ಕಾಲೊನಿಯ ಆಶಾ ಜ್ಯೋತಿ ಮಹಿಳಾ ಸಂಘದಿಂದ ಶನಿವಾರ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು.
ಪಟ್ಟಣದ ವಿವಿಧ ಪ್ರದೇಶದಲ್ಲಿ ಹತ್ತಕ್ಕೂ ಹೆಚ್ಚು ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.
ಸಂಘಟಕರು ಕೋವಿಡ್ ನಿಯಮ ಪಾಲನೆಯಾಗುವಂತೆ ನೋಡಿಕೊಳ್ಳುತ್ತಿದ್ದಾರೆ.
ಕೋವಿಡ್ ಕಾರಣ ಮುಂಚಿನಂತೆ ಸಂಭ್ರಮ ಕಾಣಿಸುತ್ತಿಲ್ಲ.
ಮೆರವಣಿಗೆಗೆ ಸರ್ಕಾರ ನಿಷೇಧ ಹೇರಿದೆ. ಆದ್ದರಿಂದ ಸರಳವಾಗಿ ಹಬ್ಬ ಆಚರಿಸಲಾಗುತ್ತಿದೆ ಎನ್ನುತ್ತಾರೆ ಸಂಘಟಕರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.