ADVERTISEMENT

ಸಿಂಧನೂರಿನಲ್ಲಿ ಗಾಂಜಾ ವಶ, ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 12:52 IST
Last Updated 18 ಸೆಪ್ಟೆಂಬರ್ 2020, 12:52 IST
ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಹನುಮೇಶ ಸರ್ಕಾರನನ್ನು ಬಂಧಿಸಲಾಯಿತು
ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಹನುಮೇಶ ಸರ್ಕಾರನನ್ನು ಬಂಧಿಸಲಾಯಿತು   

ಸಿಂಧನೂರು: ತಾಲ್ಲೂಕಿನ ಆರ್.ಎಚ್.ಕ್ಯಾಂಪ್‌ ನಂ.2 ರಲ್ಲಿ ಜಮೀನೊಂದರಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ವಶಪಡಿಕೊಂಡಿದ್ದಾರೆ. ಈ ಸಂಬಂಧ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

ಹನುಮೇಶ ಸರ್ಕಾರ (38) ಬಂಧಿತ ಆರೋಪಿ.

ಈತನು ತನ್ನ ಜಮೀನಿನಲ್ಲಿ ಬೆಳೆದಿದ್ದ ಸುಮಾರು ₹1,000 ಮೌಲ್ಯದ 1 ಕೆ.ಜಿ 140 ಗ್ರಾಂ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ.

ADVERTISEMENT

ಖಚಿತ ಮಾಹಿತಿ ಮೇರೆಗೆ ಡಿವೈಎಸ್ಪಿ ವಿಶ್ವನಾಥರಾವ್ ಕುಲಕರ್ಣಿ ಹಾಗೂ ಗ್ರಾಮೀಣ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್‌ ಜಿ.ಎಸ್.ರಾಘವೇಂದ್ರ ನೇತೃತ್ವದ ಸಿಬ್ಬಂದಿ ಚನ್ನಬಸವ, ದ್ಯಾಮಣ್ಣ, ಪರಶುರಾಮ, ಅಮರೇಶ ಹಾಗೂ ಶರಣಪ್ಪ ಅವರನ್ನು ಒಳಗೊಂಡ ತಂಡ ದಾಳಿ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.