ADVERTISEMENT

ರಾಯಚೂರು ಆಂಜನೇಯ ದೇವಸ್ಥಾನಕ್ಕೆ ರಾಜ್ಯಪಾಲರ ಭೇಟಿ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 7:44 IST
Last Updated 29 ನವೆಂಬರ್ 2021, 7:44 IST
   

ರಾಯಚೂರು: ನಗರದ ಮಹಾತ್ಮ ಗಾಂಧಿವೃತ್ತದ ಆಂಜನೇಯ ದೇವಸ್ಥಾನಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಸೋಮವಾರ ಭೇಟಿ ನೀಡಿ ದರ್ಶನ ಪಡೆದರು.

ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ತೆರಳುವ ಪೂರ್ವದಲ್ಲಿ ದೇವಸ್ಥಾನಕ್ಕೆ ಆಗಮಿಸಿದರು.

ದೇವಸ್ಥಾನದ ಅರ್ಚಕರು ಮಂಗಳವಾದ್ಯದೊಂದಿಗೆ ಅವರನ್ನು ಸ್ವಾಗತಿಸಿ, ಶಾಲು ಹೊದಿಸಿ ಗೌರವಿಸಿದರು.
ಆಂಜನೇಯ ಸ್ವಾಮಿಗೆ ಆರತಿ ಬೆಳಗಿದ ರಾಜ್ಯಪಾಲರು, ಆಂಜನೇಯ ಸ್ವಾಮಿ ದರ್ಶನ ಪಡೆದು ತೆರಳಿದರು.
ಅರ್ಚಕರಾದ ಹನುಮೇಶ ಆಚಾರ್ ಹಾಗೂ ಪವನ್‌ಆಚಾರ್ ಅವರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.