ADVERTISEMENT

ನಿರಂತರ ಪರಿಶ್ರಮದಿಂದ ಸಾಧನೆ: ದತ್ತಾತ್ರೇಯ ಕಾರ್ನಾಡ್‌

​ಪ್ರಜಾವಾಣಿ ವಾರ್ತೆ
Published 11 ಜುಲೈ 2019, 13:15 IST
Last Updated 11 ಜುಲೈ 2019, 13:15 IST
ರಾಯಚೂರಿನಲ್ಲಿ ವಿಜಯಪುರದ ಟ್ಯಾಲೆಂಟ್‌ ಕರಿಯರ್‌ ಅಕಾಡೆಮಿಯಿಂದ ಗುರುವಾರ ಆಯೋಜಿಸಿದ್ದ ಉಚಿತ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಸಿಪಿಐ ದತ್ತಾತ್ರೇಯ ಕಾರ್ನಾಡ್‌ಮಾತನಾಡಿದರು
ರಾಯಚೂರಿನಲ್ಲಿ ವಿಜಯಪುರದ ಟ್ಯಾಲೆಂಟ್‌ ಕರಿಯರ್‌ ಅಕಾಡೆಮಿಯಿಂದ ಗುರುವಾರ ಆಯೋಜಿಸಿದ್ದ ಉಚಿತ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಸಿಪಿಐ ದತ್ತಾತ್ರೇಯ ಕಾರ್ನಾಡ್‌ಮಾತನಾಡಿದರು   

ರಾಯಚೂರು:ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸುವುದಕ್ಕೆ ನಿರಂತರ ಪರಿಶ್ರಮ ಪಡಬೇಕಾಗುತ್ತದೆ ಎಂದು ಯರಗೇರಾ ವೃತ್ತದ ಸಿಪಿಐ ದತ್ತಾತ್ರೇಯ ಕಾರ್ನಾಡ್‌ ಹೇಳಿದರು.

ನಗರದ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ವಿಜಯಪುರದ ಟ್ಯಾಲೆಂಟ್‌ ಕರಿಯರ್‌ ಅಕಾಡೆಮಿಯಿಂದ ಗುರುವಾರ ಆಯೋಜಿಸಿದ್ದ ಉಚಿತ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಮಾತನಾಡಿದರು.

ಪ್ರಚಲಿತ ವಿದ್ಯಮಾನಗಳ ಬಗ್ಗೆ ತಿಳಿದುಕೊಳ್ಳಬೇಕು. ಹಿಂದಿನ ಪ್ರಶ್ನೆಪತ್ರಿಕೆಗಳ ಮಾದರಿಯನ್ನು ಅನುಸರಿಸಬೇಕು. ಓದಿಗೆ ಹೆಚ್ಚು ಸಮಯ ಮೀಸಲಿಡಬೇಕು ಎಂದು ಕಿವಿಮಾತು ಹೇಳಿದರು.

ADVERTISEMENT

ಅಕಾಡೆಮಿ ಅಧ್ಯಕ್ಷ ಅರ್ಜುನ, ಸಂಪನ್ಮೂಲ ವ್ಯಕ್ತಿಗಳಾದ ಪ್ರಕಾಶ ಚಡಚಣ, ಸಂಜೀವ, ಗುರುಸ್ವಾಮಿ, ನಿತಿನ್‌, ಸಚಿನಕುಮಾರ್‌ ಕಟ್ಟಿಮನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.