ADVERTISEMENT

ಅಹಿತಕರ ಘಟನೆಗೆ ಅಸ್ಪದ ನೀಡಬೇಡಿ: ಚ್.ಹುಲಿಗೇಶ್ ಓಂಕಾರ

​ಪ್ರಜಾವಾಣಿ ವಾರ್ತೆ
Published 2 ಮೇ 2022, 2:47 IST
Last Updated 2 ಮೇ 2022, 2:47 IST
ಶಕ್ತಿನಗರದ ಪೊಲೀಸ್ ಠಾಣೆಯಲ್ಲಿ ರಂಜಾನ್ ಅಂಗವಾಗಿ ಈಚೆಗೆ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಪಿಎಸ್‌ಐ ಎಚ್.ಹುಲಿಗೇಶ್ ಓಂಕಾರ
ಶಕ್ತಿನಗರದ ಪೊಲೀಸ್ ಠಾಣೆಯಲ್ಲಿ ರಂಜಾನ್ ಅಂಗವಾಗಿ ಈಚೆಗೆ ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದ ಪಿಎಸ್‌ಐ ಎಚ್.ಹುಲಿಗೇಶ್ ಓಂಕಾರ   

ಶಕ್ತಿನಗರ: ಈದ್‌ ಉಲ್‌ ಫಿತ್ರ್‌ ಹಬ್ಬವನ್ನು ಶಾಂತಿ ಮತ್ತು ಸೌಹರ್ದದಿಂದ ಆಚರಣೆ ಮಾಡಬೇಕು. ಯಾವುದೇ ಅಹಿತಕರ ಘಟನೆಗಳು ಅಸ್ಪದ ನೀಡಬಾರದು ಎಂದುಪಿಎಸ್‌ಐ ಎಚ್.ಹುಲಿಗೇಶ್ ಓಂಕಾರ ಹೇಳಿದರು.

ಇಲ್ಲಿನ ಪೊಲೀಸ್ ಠಾಣೆಯಲ್ಲಿ ರಂಜಾನ್ ಅಂಗವಾಗಿ ಈಚೆಗೆ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಮುಸ್ಲಿಂ ಮುಖಂಡ ಮಹೆಬೂಬ್ ಕೆರೂರ್ ಮಾತನಾಡಿ, ಎಲ್ಲಾ ಹಬ್ಬಗಳನ್ನು ಶಾಂತಿ ಮತ್ತು ಸೌಹರ್ದದಿಂದ ಆಚರಿಸಿಕೊಂಡು ಬಂದಿದ್ದೇವೆ. ಹಿಂದೂ– ಮುಸ್ಲಿಂ ಭೇದ ಭಾವ ಮಾಡದೆ, ಎಲ್ಲ ಹಬ್ಬ ಆಚರಣೆಗಳನ್ನು ಮಾಡುತ್ತೇವೆ ಎಂದರು.

ADVERTISEMENT

ಮುಸ್ಲಿಂ ಹಾಗೂ ಹಿಂದೂ ಸಮಾಜದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.