ಸಿರವಾರ: ಪಟ್ಟಣ ಪಂಚಾಯಿತಿಯ ಎಲ್ಲಾ ಸದಸ್ಯರು, ಎಲ್ಲಾ ಹಿರಿಯ ಮುಖಂಡರ ಸಹಕಾರದೊಂದಿಗೆ ಪಟ್ಟಣದ ಅಭಿವೃದ್ದಿಗೆ ಶ್ರಮಿಸುತ್ತೇನೆ' ಎಂದು ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷೆ ಲತಾ ಹೇಳಿದರು.
ಪಟ್ಟಣ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಅಧ್ಯಕ್ಷರ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಅಧಿಕಾರಿದಲ್ಲಿ ಪಕ್ಷಭೇದ ಮಾಡದೇ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಧಿಕಾರಿಗಳ ಸಹಕಾರದೊಂದಿಗೆ ಸಾರ್ವಜನಿಕರ ಸಮಸ್ಯೆಗಳಿಗೆ ಮುಕ್ತಿ ನೀಡಿ ಉತ್ತಮ ಅಧಿಕಾರ ನಡೆಸುತ್ತೇವೆ ಎಂದರು.
ಉಪಾಧ್ಯಕ್ಷ ಚನ್ನಬಸವ ಗಡ್ಲ, ಮುಖ್ಯಾಧಿಕಾರಿ ಕೆ.ಮುನಿಸ್ವಾಮಿ, ಪಟ್ಟಣ ಪಂಚಾಯಿತಿ ಸದಸ್ಯರು, ಮುಖಂಡರಾದ ಜೆ.ಶರಣಪ್ಪಗೌಡ, ಶಿವಾಜಿರಾವ್ ದರ್ಶನಕರ್, ಚುಕ್ಕಿ ಸೂಗಪ್ಪ ಸಾಹುಕಾರ, ಜಿ.ಲೋಕರೆಡ್ಡಿ, ಟಿ.ಆರ್.ಪಾಟೀಲ್, ಪ್ರಭುಗೌಡ ಹೊಸೂರು, ಮಹಿಬೂಬುಸಾಬ್ ದೊಡ್ಡಮನೆ, ಹಸೇನ್ ಅಲಿ, ಎಂ. ನಾಗರಾಜಗೌಡ, ನರಸಿಂಹರಾವ್ ಕುಲಕರ್ಣಿ, ವಿಜಯ ಕುಮಾರ ಗುಡ್ಡದಮನೆ, ರಾಮಶೆಟ್ಟಿ, ರಮೇಶ ಚಿಂಚರಕಿ ಸೇರಿದಂತೆ ಪಟ್ಟಣದ ಮುಖಂಡರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.