ಮಾನ್ವಿ: ಪಟ್ಟಣದ ಚೀಕಲಪರ್ವಿ ರಸ್ತೆಯಲ್ಲಿರುವ ವೆಂಕಟಸಾಯಿ ಆಗ್ರೋ ಇಂಡಸ್ಟ್ರೀಸ್ ರೈಸ್ಮಿಲ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸೋಮವಾರ ರಾತ್ರಿ ದಾಳಿ ಮಾಡಿ ಅಕ್ರಮವಾಗಿ ಸಂಗ್ರಹಿಸಿದ್ದ 31.50 ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ರೈಸ್ ಮಿಲ್ನಲ್ಲಿ ಪಡಿತರ ಅಕ್ಕಿ ಅಕ್ರಮವಾಗಿ ಸಂಗ್ರಹಿಸಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆಯ ಅಧಿಕಾರಿ ದೇವರಾಜು ಹಾಗೂ ಮಾನ್ವಿ ಪೊಲೀಸ್ ಠಾಣೆ ಪಿಎಸ್ಐ ವೀರನಗೌಡ ದಾಳಿ ಮಾಡಿದ್ದಾರೆ. ಆಹಾರ ಇಲಾಖೆಯ ಅಧಿಕಾರಿ ದೇವರಾಜ ನೀಡಿದ ದೂರಿನನ್ವಯ ವೆಂಕಟಸಾಯಿ ಆಗ್ರೋ ಇಂಡಸ್ಟ್ರೀಸ್ ರೈಸ್ ಮಿಲ್ ಮಾಲೀಕರ ವಿರುದ್ಧ ಮಾನ್ವಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.