ADVERTISEMENT

ದೇವದುರ್ಗ | ಮರಳು ಅಕ್ರಮ ಸಾಗಣೆ: ಟ್ರ್ಯಾಕ್ಟರ್ ಜಪ್ತಿ

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2025, 6:06 IST
Last Updated 1 ಡಿಸೆಂಬರ್ 2025, 6:06 IST
   

ದೇವದುರ್ಗ: ತಾಲ್ಲೂಕಿನ ಹೇರುಂಡಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಮರಳು ಅಕ್ರಮವಾಗಿ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನ.28ರಂದು ಸಂಜೆ ನದಿ ತೀರದಲ್ಲಿ ಮರಳನ್ನು ಅಕ್ರಮವಾಗಿ ಟ್ರ್ಯಾಕ್ಟರ್‌ಗೆ ತುಂಬುತ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ದೊರಕಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಟ್ರ್ಯಾಕ್ಟರ್‌ ಅನ್ನು ವಶಕ್ಕೆ ಪಡೆದರು. ಟ್ರ್ಯಾಕ್ಟರ್‌ ಹಾಗೂ 1.5 ಮೆಟ್ರಿಕ್‌ ಟನ್ ಮರಳು ಜಪ್ತಿ ಮಾಡಿದ್ದಾರೆ. ಚಾಲಕ ಪರಾರಿಯಾಗಿದ್ದಾನೆ. 

ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.