ರಾಯಚೂರು: ಲಾರಿಯೊಂದರಲ್ಲಿ ಅನ್ನಭಾಗ್ಯದ 80 ಕ್ವಿಂಟಲ್ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿರುವುದು ಬುಧವಾರ ಸಾತ್ಮೈಲಿ ಕ್ರಾಸ್ನಲ್ಲಿ ಪತ್ತೆಯಾಗಿದೆ.
ಮಾನ್ವಿ ತಾಲ್ಲೂಕಿನ ಕಪಗಲ್ನಿಂದ ಅಕ್ಕಿ ಸಾಗಿಸಲಾಗುತ್ತಿತ್ತು ಎಂದು ಗೊತ್ತಾಗಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ.
ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಅರುಣ ಸಂಗಾವಿ ನೇತೃತ್ವದಲ್ಲಿ ಆಹಾರ ನಿರೀಕ್ಷಕರಾದ ಬಿ.ಅರ್.ವೆಂಕಣ್ಣ, ಖಲೀಲ್ ಅಹ್ಮದ್ ದಾಳಿ ನಡೆಸಿದರು. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.