ADVERTISEMENT

ದೇವದುರ್ಗ: ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪ, ಪ್ರಭಾರ ಪ್ರಾಚಾರ್ಯ ಅಮಾನತು

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2023, 14:30 IST
Last Updated 6 ಅಕ್ಟೋಬರ್ 2023, 14:30 IST
   

ದೇವದುರ್ಗ: ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ಆರೋಪದ ಮೇಲೆ ಇಲಾಖೆ ವಿಚಾರಣೆ ಕಾಯ್ದಿರಿ ತಾಲ್ಲೂಕಿನ ಮಸರಕಲ್ ಗ್ರಾಮದ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಸಿದ್ದಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಸಿದ್ದಪ್ಪ ವಿರುದ್ಧ ಲೈಂಗಿಕ ಕಿರುಕುಳ, ದೌರ್ಜನ್ಯ ಮತ್ತು ಸಿಬ್ಬಂದಿಗೆ ಕಿರುಕುಳ ಹಾಗೂ ಎರಡನೇ ಮದುವೆಯಾಗಿರುವ ಬಗ್ಗೆ ಆರೋಪ ಕೇಳಿಬಂದಿವೆ. ಸಾಮಾಜಿಕ ಜಾಲತಾಣಗಳಲ್ಲಿ ಎರಡನೇ ಮದುವೆಯಾದ ಫೋಟೊ, ಅಶ್ಲೀಲ ಚಿತ್, ವಿಡಿಯೊ ಹಾಗೂ ಸಂಭಾಷಣೆ ಹರಿದಾಡಿದ್ದನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಗಂಭೀರವಾಗಿ ಪರಿಗಣಿಸಿದೆ.

ಇಲಾಖೆ ರಚಿಸಿದ ವಿಶೇಷ ತನಿಖಾ ತಂಡ ಗ್ರಾಮಕ್ಕೆ ಭೇಟಿ ನೀಡಿ ಕಾಲೇಜಿನ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರಿಂದಲೂ ಮಾಹಿತಿ ಕಲೆ ಹಾಕಿದೆ. ಲೈಂಗಿಕ ಕಿರುಕುಳದ ಬಗ್ಗೆ ಗ್ರಾಮದ ಮುಖಂಡರು, ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಪಾಲಕರು ಹೇಳಿಕೆಗಳನ್ನು ಕೊಟ್ಟಿದ್ದಾರೆ. ಸಮಗ್ರವಾದ ವರದಿ ಸಿದ್ದಪಡಿಸಿ ಇಲಖೆಯ ನಿರ್ದೇಶಕರಿಗೆ ಸಲ್ಲಿಸಲಾಗಿದೆ.

ADVERTISEMENT

ವರದಿಯಲ್ಲಿನ ಅಂಶಗಳು ಮೇಲ್ನೋಟಕ್ಕೆ ಸಾಬೀತು ಹಿನ್ನೆಲೆ ಇಲಾಖೆಯ ತನಿಖೆಯನ್ನು ಕಾಯ್ದಿರಿಸಿ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಉಪ ನಿರ್ದೇಶಕ ಸೋಮಶೇಖರಪ್ಪ ಹೊಕ್ರಾಣಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.