ADVERTISEMENT

‘ಮೀನು ಸಾಗಿಸಲು ಪ್ರಮಾಣಪತ್ರ’

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2018, 10:04 IST
Last Updated 1 ಡಿಸೆಂಬರ್ 2018, 10:04 IST
ವೆಂಕಟರಾವ್‌ ನಾಡಗೌಡ
ವೆಂಕಟರಾವ್‌ ನಾಡಗೌಡ   

ರಾಯಚೂರು: ಕರಾವಳಿ ಭಾಗದಿಂದ ಗೋವಾ ರಾಜ್ಯಕ್ಕೆ ಮೀನು ಸಾಗಿಸುವವರಿಗೆ ರಾಜ್ಯ ಸರ್ಕಾರದಿಂದ ಪ್ರಮಾಣಪತ್ರ ನೀಡಲಾಗುತ್ತಿದೆ ಎಂದು ಮೀನುಗಾರಿಕೆ ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಯಮ ಪಾಲನೆ ಮಾಡುತ್ತಿರುವವರಿಗೆ ಮಾತ್ರ ಪ್ರಮಾಣಪತ್ರವನ್ನು ಅಧಿಕಾರಿಗಳು ನೀಡುತ್ತಿದ್ದಾರೆ. ಇದನ್ನು ತೋರಿಸಿದ ಮೀನು ಸಾಗಣೆ ವಾಹನಗಳನ್ನು ಗೋವಾ ಅಧಿಕಾರಿಗಳು ಬಿಡುತ್ತಿದ್ದಾರೆ. ನಿಷೇಧ ತೆರವುಗೊಳಿಸುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಗೋವಾ ಮುಖ್ಯಮಂತ್ರಿಗೆ ಪತ್ರ ಬರೆದು ಕೋರಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT