ADVERTISEMENT

ಕೊರ್ತಕುಂದ: ರಥೋತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 29 ಜನವರಿ 2023, 16:24 IST
Last Updated 29 ಜನವರಿ 2023, 16:24 IST
ಶಕ್ತಿನಗರದ ಬಳಿಯ ಕೊರ್ತಕುಂದದಲ್ಲಿ ರಂಗನಾಥ ಸ್ವಾಮಿ ರಥೋತ್ಸವ ನಡೆಯಿತು
ಶಕ್ತಿನಗರದ ಬಳಿಯ ಕೊರ್ತಕುಂದದಲ್ಲಿ ರಂಗನಾಥ ಸ್ವಾಮಿ ರಥೋತ್ಸವ ನಡೆಯಿತು   

ಶಕ್ತಿನಗರ: ರಾಯಚೂರು ತಾಲ್ಲೂಕಿನ ಕೊರ್ತಕುಂದ ಗ್ರಾಮದಲ್ಲಿ ಶನಿವಾರ ರಂಗನಾಥ ಸ್ವಾಮಿ ದೇವರ ರಥೋತ್ಸವ ನಡೆಯಿತು.

ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ದೇವರ ದರ್ಶನ ಪಡೆದು ನೈವೇದ್ಯ, ಕಾಯಿ–ಕ ರ್ಪೂರ ಅರ್ಪಿಸಿದರು. ತಾಲ್ಲೂಕಿನ ಸಗಮಕುಂಟ, ಕೊರ್ತಕುಂದಾ, ಶಿವವಿ ಲಾಸನಗರ, ಯರಗುಂಟ, ಮಾ ಮಡದೊಡ್ಡಿ, ಗಂಜಳ್ಳಿ, ಶಕ್ತಿನಗರ, ಡಿ.ಯದ್ಲಾಪುರ, ದೇವಸೂಗೂರು ಸೇರಿ ಸುತ್ತಲಿನ ಗ್ರಾಮಗಳ ಭಕ್ತರು ರಥಕ್ಕೆ ಬಾಳೆಹಣ್ಣು ಅರ್ಪಿಸಿದರು. ಅದಕ್ಕೂ ಮುನ್ನ ರಂಗನಾಥ ಸ್ವಾಮಿ ರಥದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಉತ್ಸವ ಮೂರ್ತಿಗೆ ಭಕ್ತರು ಪೂಜೆ ಸಲ್ಲಿಸಿದರು. 31ರವರೆಗೆ ಜಾತ್ರಾ ಮಹೋತ್ಸವ ಜರುಗಲಿದೆ. 27ರಂದು ಉತ್ಸವ ಮತ್ತು 28 ರಂದು ಬ್ರಹ್ಮೋತ್ಸವದಲ್ಲಿ ವಿವಿಧ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT