ADVERTISEMENT

ಮಾನ್ವಿ | ಜಗನ್ನಾಥದಾಸರ ಆರಾಧನೆ: ರಥೋತ್ಸವ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2024, 14:30 IST
Last Updated 13 ಸೆಪ್ಟೆಂಬರ್ 2024, 14:30 IST
ಮಾನ್ವಿಯಲ್ಲಿ ಶುಕ್ರವಾರ ಜಗನ್ನಾಥದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಉತ್ತರಾರಾಧನೆ ಹಮ್ಮಿಕೊಳ್ಳಲಾಗಿತ್ತು
ಮಾನ್ವಿಯಲ್ಲಿ ಶುಕ್ರವಾರ ಜಗನ್ನಾಥದಾಸರ ಆರಾಧನಾ ಮಹೋತ್ಸವದ ಅಂಗವಾಗಿ ಉತ್ತರಾರಾಧನೆ ಹಮ್ಮಿಕೊಳ್ಳಲಾಗಿತ್ತು   

ಮಾನ್ವಿ: ಪಟ್ಟಣದ ರಾಘವೇಂದ್ರ ಸ್ವಾಮಿಗಳ ಮಠದ ಜಗನ್ನಾಥದಾಸರ ಸನ್ನಿಧಾನದಲ್ಲಿ ಶುಕ್ರವಾರ ಜಗನ್ನಾಥದಾಸರ 215ನೇ ಆರಾಧನಾ ಮಹೋತ್ಸವದ ಉತ್ತರಾರಾಧನೆ ಅಂಗವಾಗಿ ರಥೋತ್ಸವ ಜರುಗಿತು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಸುಪ್ರಭಾತ, ಸಾಮೂಹಿಕ ಹರಿಕಾಥಾಮೃತಸಾರ ಪಾರಾಯಣ ಮತ್ತಿತರ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಾಯಿತು. ವಿದ್ವಾಂಸರಿಂದ ವಿಶೇಷ ಉಪನ್ಯಾಸ ಹಾಗು ದಾಸವಾಣಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಜಗನ್ನಾಥದಾಸರ ಸನ್ನಿಧಾನದ ಆವರಣದಲ್ಲಿ ರಥೋತ್ಸವ ಜರುಗಿತು.

ಸ್ವಸ್ತಿವಾಚನ ಮತ್ತು ಮಹಾಮಂಗಳಾರತಿ ಸೇರಿದಂತೆ ವಿವಿಧ ಭಜನಾ ಮಂಡಳಿಯವರಿಂದ ಭಜನೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಪಟ್ಟಣ ಸೇರಿದಂತೆ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.